ರಾಜ್ಯ

ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವು: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು.

ಸದಸ್ಯ ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದ್ವಿಚಕ್ರ ವಾಹನ, ಬಸ್, ಕಾರು, ಟ್ರ್ಯಾಕ್ಟರ್ ಮತ್ತಿತರ ವಾಹನಗಳ ಅಪಘಾತದಿಂದ ದೇಶಾದ್ಯಂತ 1,25,000 ಜನ ಸಾವನ್ನಪ್ಪಿದರೆ, ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಜನ ಸಾಯುತ್ತಾರೆ ಎಂದು ಹೇಳಿದರು.

ಅಪಘಾತಗಳ ಪ್ರಕರಣಗಳನ್ನು ತಡೆಗಟ್ಟಲು ನಾವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕಟ್ಟುನಿಟ್ಟಿನ ದಂಡ ವಿಧಿಸುವುದು, ಡಿಎಲ್ ರದ್ದುಪಡಿಸುವುದು, ಕಾನೂನು ಕ್ರಮಗಳಂತಹ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದರೂ ಅಪಘಾತಗಳು ಕಡಿಮೆಯಾಗುತ್ತಿಲ್ಲ ಎಂದು ವಿಷಾದಿಸಿದರು.

ಶಾಲಾ ಕಾಲೇಜುಗಳಲ್ಲಿ ಮಕ್ಕಳು ಮತ್ತು ವಿದ್ಯಾರ್ಥಿಗಳಿಂದ ಜಾಗೃತಿ ಅಭಿಯಾನ, ಮದ್ಯಪಾನ ಮಾಡಿ ವಾಹನ ಚಾಲನೆ ನಿಷೇಧ, ವೀಲ್ಹಿಂಗ್ ಮಾಡಿದವರ ಡಿಎಲ್ ರದ್ದು ಸೇರಿದಂತೆ ಹತ್ತಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾವು ಎಷ್ಟೇ ಕಾನೂನು ಕ್ರಮ ವಿಧಿಸಿದರೂ ಜನರಲ್ಲಿ ಜಾಗೃತಿ ಬರದೆ ಇದ್ದರೆ ನಾವೇನು ಮಾಡಲು ಸಾಧ್ಯ? ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago