ರಾಜ್ಯ

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ : ಸಚಿವ ಬೈರತಿ ಸುರೇಶ್

ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.‌

ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅವರು ಈ ವಿಷಯ ತಿಳಿಸಿದರು.

ಈ ಗೃಹಭಾಗ್ಯ ಯೋಜನೆಗೆ ಒಟ್ಟು 6119 ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ 326 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಇದುವರೆಗೆ 4159 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172 ಮತ್ತು ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪೌರಕಾರ್ಮಿಕರ ವಿಶೇಷ ನೇಮಕಾತಿ
ಪೌರಕಾರ್ಮಿಕರ ಹೊರಗುತ್ತಿಗೆ ಪದ್ಧತಿಯನ್ನು 2017 ರಲ್ಲಿ ಸ್ಥಗಿತಗೊಳಿಸಿ, ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ವಿಶೇಷ ನೇಮಕಾತಿಯಡಿ ಅವಕಾಶ ನೀಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ಸಾವಿರಾರು ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.

ಇದನ್ನು ಓದಿ: ಕಾವೇರಿ,ಕಬಿನಿ ನದಿಗೆ ತ್ಯಾಜ್ಯ : 11 ಸ್ಥಳೀಯ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 127 ಮತ್ತು ವಿಜಯಪುರದಲ್ಲಿ 66 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಿರುವುದು ಸಂತಸದ ವಿಚಾರ. ಇನ್ನೂ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗಣಿಕೀಕೃತ ಖಾತಾ ನೀಡುವ ಉದ್ದೇಶದಿಂದ 2016 ರಿಂದ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. 2019 ರಿಂದ ಮಹಾನಗರಪಾಲಿಕೆಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ರಾಜ್ಯಾದ್ಯಂತ ಸುಮಾರು 29 ಲಕ್ಷ ಇ-ಖಾತಾಗಳನ್ನು ಸೃಜಿಸಲಾಗಿದೆ. ಇದರಲ್ಲಿ 25,03,385 ಎ-ಖಾತಾ ಮತ್ತು 4,39,889 ಬಿ-ಖಾತಾಗಳು ಸೇರಿವೆ ಎಂದರು.

ಅಧಿಕೃತ ಆಸ್ತಿಗಳ ಜೊತೆಗೆ, ಕಂದಾಯ ಭೂಮಿ ಮತ್ತು ಅನುಮೋದನೆಯಾಗದ ಬಡಾವಣೆಗಳಲ್ಲಿನ ಆಸ್ತಿಗಳಿಗೂ ಇ-ಖಾತಾ ನೀಡಲು ಕಾಯ್ದೆಗೆ ತಿದ್ದುಪಡಿ ತಂದು ಬಿ-ಖಾತಾ ನೀಡಲು ಅವಕಾಶ ಕಲ್ಪಿಸಲಾಗಿದೆ. ದಿನಾಂಕ 10-09-2024ರ ಪೂರ್ವದಲ್ಲಿ ನೋಂದಣಿಯಾದ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಅವಕಾಶವಿದೆ. ನಾಗರಿಕರು ತಮ್ಮ ಆಸ್ತಿ ವಿವರಗಳನ್ನು ಆನ್ಲೈನ್ನಲ್ಲಿ ವೀಕ್ಷಿಸಿ, ವಿವರಗಳು ಸರಿಯಿದ್ದರೆ ನೇರವಾಗಿ ಅಂತಿಮ ಇ-ಖಾತೆಯನ್ನು ಪಡೆಯಬಹುದು. ವ್ಯತ್ಯಾಸಗಳಿದ್ದಲ್ಲಿ ಆನ್ಲೈನ್ ಮೂಲಕವೇ ಮಾಹಿತಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಲಿದ್ದು, ಕಚೇರಿಗಳಿಗೆ ಅಲೆಯುವ ಅವಶ್ಯಕತೆ ಇರುವುದಿಲ್ಲ ಎಂದು ಬೈರತಿ ಸುರೇಶ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

21 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

22 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

22 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

22 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

22 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago