ರಾಜ್ಯ

6000 ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ.

ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

ಮೌಡ್ಯ, ಕಂದಾಚಾರಗಳು ತೊಲಗಬೇಕಾದರೆ ಓದು ಮುಖ್ಯ. ಮೌಢ್ಯದ ಕಾರಣದಿಂದ ಗ್ರಾಮೀಣ ಜನರ ಬದುಕು ಬಹಳ ಹಿಂದುಳಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಇದೇ ಅಂಬೇಡ್ಕರ್ ಅವರ ಕನಸಾಗಿತ್ತು ಎಂದರು.

ಜ್ಞಾನ ಪಡೆಯುವುದು ಎಂದರೆ ಮನುಷ್ಯರಾಗಿ ಬಾಳುವುದು. ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಸಾಮಾಜಿಕ ಪ್ರಭಾವದಿಂದ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದ್ದಾರೆ. ಆದ್ದರಿಂದ ಬೆಳೆಯುತ್ತಲೂ ನಾವು ವಿಶ್ವ ಮಾನವರಾಗಿ ಉಳಿಯುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಮಾನವನ ಹುಟ್ಟು ಸಾರ್ಥಕ ಆಗುತ್ತದೆ ಎಂದರು.

ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ.

ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, MLC ವಿಧಾನ‌ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ನಗರದಲ್ಲಿ ಹೆಚ್ಚಿನ ಸಸಿ ನೆಟ್ಟು ನೀರೆರಿಯಿರಿ : ಅರಣ್ಯ ಸಚಿವ ಖಂಡ್ರೆ

ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು…

13 mins ago

ಅಜ್ಜೀಪುರದಿಂದ ಶಕ್ತಿಸೌಧಕ್ಕೆ ಪಾದಯಾತ್ರೆ : ರೈತ ಸಂಘಟನೆಗಳ ಬೆಂಬಲಕ್ಕೆ ಮನವಿ

ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ…

39 mins ago

ಕಾಡುಕೋಣ ಡಿಕ್ಕಿ : ಪಲ್ಟಿಯಾದ ಗೂಡ್ಸ್‌ ವಾಹನ

ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…

55 mins ago

ದೇವಾಲಯಗಳಲ್ಲಿ ರೀಲ್ಸ್‌ಗೆ ಶುಲ್ಕ

ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…

2 hours ago

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸ್ ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…

2 hours ago

ಏಪ್ರಿಲ್‌ನಿಂದ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…

2 hours ago