ರಾಜ್ಯ

6000 ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ.

ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

ಮೌಡ್ಯ, ಕಂದಾಚಾರಗಳು ತೊಲಗಬೇಕಾದರೆ ಓದು ಮುಖ್ಯ. ಮೌಢ್ಯದ ಕಾರಣದಿಂದ ಗ್ರಾಮೀಣ ಜನರ ಬದುಕು ಬಹಳ ಹಿಂದುಳಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಇದೇ ಅಂಬೇಡ್ಕರ್ ಅವರ ಕನಸಾಗಿತ್ತು ಎಂದರು.

ಜ್ಞಾನ ಪಡೆಯುವುದು ಎಂದರೆ ಮನುಷ್ಯರಾಗಿ ಬಾಳುವುದು. ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಸಾಮಾಜಿಕ ಪ್ರಭಾವದಿಂದ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದ್ದಾರೆ. ಆದ್ದರಿಂದ ಬೆಳೆಯುತ್ತಲೂ ನಾವು ವಿಶ್ವ ಮಾನವರಾಗಿ ಉಳಿಯುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಮಾನವನ ಹುಟ್ಟು ಸಾರ್ಥಕ ಆಗುತ್ತದೆ ಎಂದರು.

ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ.

ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, MLC ವಿಧಾನ‌ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago