ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. ಈ ಮುಂಗಾರು ಮಳೆ ಜೂನ್.1ರಿಂದ ಸೆಪ್ಟೆಂಬರ್.30ರವರೆಗೂ ದಾಖಲೆಗಳ ಪ್ರಕಾರವಿತ್ತು.
ಇದನ್ನು ಓದಿ : ಸತತ ಮಳೆಗೆ ಕುಸಿದ ಶಾಲಾ ಕಟ್ಟಡದ ಗೋಡೆ
ಇದುವರೆಗೂ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿದೆ. ಈ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 339 ಸೆಂಟಿ ಮೀಟರ್ ಮುಂಗಾರು ಮಳೆಯಾಗಿದ್ದು, ಸರಾಸರಿಗಿಂತ 14 ಸೆಂಟಿ ಮೀಟರ್ ಹೆಚ್ಚಿನ ಮಳೆಯಾಗಿದೆ.
ಇನ್ನು ಈ ವರ್ಷ ಮುಂಗಾರಿನಂತೆ ಹಿಂಗಾರು ಮಳೆಯೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ನಿಂದ ಡಿಸೆಂಬರ್ವರೆಗೂ ವ್ಯಾಪಕ ಮಳೆಯಾಗಲಿದ್ದು, ಜನರಿಗೆ ಮಳೆ ಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ಸೂಚನೆ ನೀಡಿದ್ದಾರೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…