ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. ಈ ಮುಂಗಾರು ಮಳೆ ಜೂನ್.1ರಿಂದ ಸೆಪ್ಟೆಂಬರ್.30ರವರೆಗೂ ದಾಖಲೆಗಳ ಪ್ರಕಾರವಿತ್ತು.
ಇದನ್ನು ಓದಿ : ಸತತ ಮಳೆಗೆ ಕುಸಿದ ಶಾಲಾ ಕಟ್ಟಡದ ಗೋಡೆ
ಇದುವರೆಗೂ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿದೆ. ಈ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 339 ಸೆಂಟಿ ಮೀಟರ್ ಮುಂಗಾರು ಮಳೆಯಾಗಿದ್ದು, ಸರಾಸರಿಗಿಂತ 14 ಸೆಂಟಿ ಮೀಟರ್ ಹೆಚ್ಚಿನ ಮಳೆಯಾಗಿದೆ.
ಇನ್ನು ಈ ವರ್ಷ ಮುಂಗಾರಿನಂತೆ ಹಿಂಗಾರು ಮಳೆಯೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ನಿಂದ ಡಿಸೆಂಬರ್ವರೆಗೂ ವ್ಯಾಪಕ ಮಳೆಯಾಗಲಿದ್ದು, ಜನರಿಗೆ ಮಳೆ ಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ಸೂಚನೆ ನೀಡಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…