ರಾಜ್ಯ

೪೦ ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್ದಾದರರು ಪತ್ತೆ

ಬೆಂಗಳೂರು : ಒಂದು ಕಡೆ ಬಿಪಿಎಲ್‌ ಕಾರ್ಡ್‌ ಗಳಿಗೆ ಅರ್ಜಿ ಹಾಕಲು ಆಹಾರ ಇಲಾಖೆ ಈಗಷ್ಟೇ ಅವಕಾಶವನ್ನು ನೀಡುತ್ತಿದೆ. ಇದರ ಮಧ್ಯೆ ಬಿಪಿಎಲ್‌ ಕಾರ್ಡ್‌ ಗಳಲ್ಲಿ ಅನರ್ಹ ಫಲಾನುಭವಿಗಳು ಕಂಡು ಬಂದಿದ್ದು, ಇಲಾಖೆ ಭರ್ಜರಿ ಕಾರ್ಯಾಚರಣೆ ಶುರು ಮಾಡಿದೆ.

ರಾಜ್ಯದಲ್ಲಿ ನಿಯಮಗಳನ್ನ ಗಾಳಿಗೆ ತೂರಿ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಒಟ್ಟು ೪೦ ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌ದಾದರರು ಇರುವುದು ಪತ್ತೆಯಾಗಿದೆ. ಈ ಪಟ್ಟಿಯಲ್ಲಿ ಶೇ.೨೦ರಷ್ಟು ಕಾರ್ಡ್ ಗಳು ಬೆಂಗಳೂರಿನಲ್ಲಿಯೇ ಕಂಡು ಬಂದಿದೆ.

ಬಡತನ ರೇಖೆ ಮೇಲಿರುವವರು ಕೂಡ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಮುಂದಾಗಿದೆ. ಅನರ್ಹರು ದುಬಾರಿ ವೆಚ್ಚದ ಆರೋಗ್ಯ ಸೇವೆ, ಕೃಷಿ ಉದ್ದೇಶಿತ ಯೋಜನೆ, ವಸತಿ ಯೋಜನೆಗಳಂತಹ ನಾನಾ ಸರ್ಕಾರಿ ಸೌಲಭ್ಯಗಳ ಬಳಕೆ ಮಾಡುವ ಸಲುವಾಗಿ ನಿಯಮಗಳನ್ನ ಮೀರಿ ಕಾರ್ಡ್‌ ಬಳಕೆ ಮಾಡುತ್ತಿದ್ದಾರೆ. ಜೊತೆಗೆ ಅರ್ಹತೆ ಇಲ್ಲದಿದ್ದರೂ ಕೂಡ  ಈ ಕಾರ್ಡ್‌ ಗಳನ್ನ ಬಳಸಿಕೊಂಡು ಅನ್ನಭಾಗ್ಯ, ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಇತರೆ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಇದರಿಂದ ಅರ್ಹರಿಗೆ ಸಿಗಬೇಕಾಗಿರುವ ಎಷ್ಟೋ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿದ್ದು ಅನರ್ಹರ ಕಾರ್ಡ್‌ ಅನ್ನು ಎಪಿಎಲ್‌ ಪಟ್ಟಿಗೆ ಸೇರಿಸಲು ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago