ರಾಜ್ಯ

ಮೋದಿ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ರೈಲು : ಕೇಂದ್ರ ಸಚಿವ ಎಚ್‌ಡಿಕೆ

ಬೆಂಗಳೂರು : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಭಾರತೀಯ ರೈಲ್ವೆ ವಲಯದಲ್ಲಿ ಪರಿವರ್ತನಾತ್ಮಕ ಹೆಜ್ಜೆ ಆಗಿದ್ದು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ರಾಷ್ಟ್ರದ ರೈಲ್ವೆ ವ್ಯವಸ್ಥೆ ಉತ್ಕೃಷ್ಟತೆಯತ್ತ ಸಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ‘ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು’ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಶನಿವಾರ ಸಂಜೆ ಸ್ವಾಗತಿಸಿ ಸಚಿವರು ಮಾತನಾಡಿದರು.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಕನಸು ಕಂಡವರೇ ಅದನ್ನು ಸಾಕಾರಗೊಳಿಸುತ್ತಿರುವ ಧೃಢ ಸಂಕಲ್ಪದ ನಿದರ್ಶನ ಇದಾಗಿದೆ. ಕರ್ನಾಟಕಕ್ಕೆ ಈವರೆಗೆ ಬಂದಿರುವ ಏಳನೇ ವಂದೇ ಭಾರತ್ ರೈಲು ಇದಾಗಿದೆ ಎಂದು ಸಚಿವರು ಹೇಳಿದರು.

ಭಾರತದಲ್ಲಿ ವಿಶ್ವ ದರ್ಜೆಯ ರೈಲುಗಳ ಲೋಕಾರ್ಪಣೆಯಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿ ವಂದೇ ಭಾರತ್ ರೈಲನ್ನು ಗುರುತಿಸಬಹುದಾಗಿದೆ. ಈ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಲೋಕಾರ್ಪಣೆ ಮಾಡಿದರು. ಇದು ಆಧುನಿಕ ರೈಲು ಮೂಲಸೌಕರ್ಯದ ಮೇಲೆ ರಾಷ್ಟ್ರೀಯ ಮಹತ್ವವನ್ನು ಇನ್ನೂ ಮುಂದಕ್ಕೆ ಕೊಂಡೊಯ್ಯುವ ಹೆಜ್ಜೆಯಾಗಿದೆ ಎಂದು ಸಚಿವರು ನುಡಿದರು.

ಇದನ್ನು ಓದಿ: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ವಂದೇ ಭಾರತ್ ರೈಲುಗಳ ತಾಂತ್ರಿಕ ಉತ್ಕೃಷ್ಟತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಸಚಿವರು, “ಈ ರೈಲು ನಮ್ಮದೇ ಆದ ಎಂಜಿನಿಯರ್‌ಗಳು ಮತ್ತು ಉದ್ಯಮದ ಶ್ರೇಷ್ಠತೆಯಿಂದ ವಿನ್ಯಾಸಗೊಳಿಸಲ್ಪಟ್ಟ, ನಿರ್ಮಿಸಲ್ಪಟ್ಟ ಮತ್ತು ಪರಿಪೂರ್ಣಗೊಳಿಸಲ್ಪಟ್ಟ ರೈಲು ಆಗಿದೆ. ಪ್ರಧಾನಿಗಳ ಮಹತ್ವಾಕಾಂಕ್ಷೆಯ ಅನಿರ್ಭರ ಭಾರತ, ವಿಕಸಿತ ಭಾರತ ಪರಿಕಲ್ಪನೆಗಳ ಸಾಕಾರವಾಗಿ ಈ ರೈಲುಗಳು ಕಾಣುತ್ತಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮೋದಿ ಅವಧಿಯಲ್ಲಿ ರಾಜ್ಯ ಹೆಚ್ಚು ರೈಲ್ವೆ ಅನುಕೂಲ
ನರೇಂದ್ರ ಮೋದಿ ಅವರು ಪ್ರಧಾನಿಗಳಾದ ರಾಜ್ಯಕ್ಕೆ ಕೇಂದ್ರದಿಂದ ಅತಿಹೆಚ್ಚು ರೈಲ್ವೆ ಅನುಕೂಲ ಆಗುತ್ತಿದೆ ಎಂದ ಸಚಿವ ಕುಮಾರಸ್ವಾಮಿ ಅವರು; ಕಳೆದ ಬಜೆಟ್ ನಲ್ಲಿ ರಾಜ್ಯಕ್ಕೆ ₹7,564 ಕೋಟಿಗೂ ಹೆಚ್ಚಿನ ಅನುದಾನ ದೊರೆತಿದೆ. ಪ್ರತೀ ವರ್ಷವೂ ಹೊಸ ರೈಲುಗಳು ದೊರೆಯುತ್ತಿದೆ. ರಾಜ್ಯದ ಬಹುತೇಕ ರೈಲ್ವೆ ಮಾರ್ಗವು ವಿದ್ಯುದ್ದೀಕರಣ ಆಗಿದೆ. 2025ರ ವೇಳೆಗೆ ಶೇ. 100ರಷ್ಟು ವಿದ್ಯುದ್ದೀಕರಣ ಪೂರ್ಣಗೊಳ್ಳಲಿದೆ ಎಂದು ಒತ್ತಿ ಹೇಳಿದರು.

ಸಂಸದರಾದ ಪಿ.ಸಿ. ಮೋಹನ್, ಲೆಹರ್ ಸಿಂಗ್ ಸಿರೋಯ ಮತ್ತು ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು, ರೈಲ್ವೆ ಎಂಜಿನಿಯರ್‌ಗಳು, ಸಿಬ್ಬಂದಿ ಮತ್ತು ಸಾರ್ವಜನಿಕ ಪ್ರತಿನಿಧಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

2 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

2 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

2 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

4 hours ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

6 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

11 hours ago