ಶಿವಮೊಗ್ಗ: ಬಿಹಾರ ವಿಧಾನಸಭೆ ಚುನಾವಣೆಗೆಂದು ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ ಸಚಿವರ ವಸೂಲಿಗೆ ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಎದುರಿಗೆ ಹೇಳುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಎಂದು ಹಣ ಸಂಗ್ರಹ ಮಾಡುತ್ತಿದ್ದಾರೆ. ಈಗ ದಂಧೆ ಆಗಿದೆ. ಅದು ಬಿಹಾರಕ್ಕೂ ತಲುಪಲ್ಲ. ಅದು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗುತ್ತದೆ. ಬಿಹಾರ ಚುನಾವಣೆ ಇಟ್ಟುಕೊಂಡು ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಕಳೆದ ಒಂದು ವಾರದಿಂದ ಆರ್ಎಸ್ಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್ ಮೇಲೆ ನಿರ್ಬಂಧ ಹೇರುವ ಕೆಲಸ ಮಾಡುತ್ತಿದೆ. ಆರ್ಎಸ್ಎಸ್ ಆಸ್ತಿ ಪರಿಶೀಲನೆ ಮಾಡಿಸುವ ಕೆಲಸ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ನ ಅಧಃಪತನಕ್ಕೆ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…