ಹುಬ್ಬಳ್ಳಿ: ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕಾಗಿಯೇ ಎಲ್ಲಾ ದರಗಳನ್ನು ಏರಿಕೆ ಮಾಡಲಾಗುತ್ತಿದೆ. ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ಏರಿಕೆ ವಿಚಾರದಲ್ಲಿ ಎಲ್ಲಾ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಸಿಎಂ ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದು ಅದಕ್ಕೆ ಸಾಕ್ಷಿ ಎಂದು ಹೇಳಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲಾ ದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ ದರ ಸೇರಿದಂತೆ ಎಲ್ಲಾ ದರವನ್ನು ಏರಿಸಿದೆ. ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.
ಇನ್ನು ಮೈಸೂರಿನ ಉದಯಗರಿ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಗೊತ್ತಾಗುತ್ತದೆ. ಈ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ ಎಂದು ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ಕಿಡಿಕಾರಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…