ರಾಜ್ಯ

ಡಿಸಿಎಂ ಡಿಕೆಶಿ ತಮ್ಮ ವ್ಯಕ್ತಿತ್ವದ ವಿರುದ್ಧವಾಗಿ ಸಹನೆ ಪ್ರದರ್ಶಿಸುತ್ತಿದ್ದಾರೆ: ಸಂಸದ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವ್ಯಕ್ತಿತ್ವದ ವಿರುದ್ಧವಾಗಿ ಸಹನೆ ಪ್ರದರ್ಶಿಸುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.8) ಡಿನ್ನರ್‌ ಪಾಲಿಟಿಕ್ಸ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭದಿಂದಲೂ ಇದೆ. ಆದರೆ ಇದು ನಿರೀಕ್ಷಿತ ಬೆಳವಣಿಗೆ ಇದರಲ್ಲಿ ಬಹಳ ಮುಖ್ಯ ವಿಚಾರ ಏನೆಂದರೆ ಡಿಕೆಶಿ ಅವರ ಸಹನೆ ಹಾಗೂ ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಡಿಕೆಶಿ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ‌. ಅದಕ್ಕೆ ಪೂರಕವಾಗಿ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಮೇಲಿನ ಕಮೀಷನ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಎಲ್ಲದರಲ್ಲಿ ಕಮಿಷನ್ ಭ್ರಷ್ಟಾಚಾರ ನಡೆಸುತ್ತಿದ್ದು, ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯುಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಅನುಭವಿಸುತ್ತಿದ್ದಾರೆ. ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನೂ ಎಸ್‌ಸಿ, ಎಸ್ಟಿ ಬೋರ್‌ವೆಲ್‌ಗಳಿಗೂ ಕಮಿಷನ್‌ ಪಡೆಯುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈ ತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮಿಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ, ಆದರೆ ಕುಮಾರಸ್ವಾಮಿಯವರು ಹೇಳಿರುವ ಪ್ರಕಾರ ಭ್ರಷ್ಟಾಚಾರ ಮಿತಿಮೀರಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಡಿನ್ನರ್‌ ಮೀಟಿಂಗ್‌ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago