ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್ ಕ್ಯಾಂಪಸ್ನಲ್ಲಿ ಸುಮಾರು 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಬೇಕು ಎಂದು ಸಂಸದ ಡಾ.ಸಿಎನ್ ಮಂಜುನಾಥ್ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಗೆ ಮನವಿ ಸಲ್ಲಿಸಿದ್ದಾರೆ.
ನಿಮ್ಹಾನ್ಸ್ ಆಸ್ಪತ್ರೆ ಆರಂಭವಾದಾಗ ಪ್ರತಿದಿನ 250 ರಿಂದ 300ರ ಹತ್ತಿರ ರೋಗಿಗಳು ಬರುತ್ತಿದ್ದರು. ಈಗ ಅದರ ಸಂಖ್ಯೆ 2500ಕ್ಕಿಂತಲೂ ಹೆಚ್ಚಾಗಿದೆ. ಆದ ಕಾರಣ ಪಾಲಿಟ್ರಾಮಾ ಕೇಂದ್ರ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ದೇಶದಲ್ಲಿ ಸಾವುಗಳು ಹೆಚ್ಚಾಗಿ ಸಂಭವಿಸುವ ಅಪಘಾತಗಳಲ್ಲಿ ರಸ್ತೆ ಅಪಘಾತವು ಒಂದಾಗಿದೆ. ರಸ್ತೆ ಅಪಘಾತಗಳಿಂದ ಸಾವಿಗೀಡಾಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಾಗುತ್ತಿರುವ ಸಾವುಗಳಿಗೆ ರಸ್ತೆ ಅಪಘಾತ ದೇಶದ ಅತಿದೊಡ್ಡ ಐದನೇ ಕಾರಣವಾಗಿದೆ.
ಅಪಘಾತದಲ್ಲಿ ಗಾಯವಾದವರಿಗೆ ಗೋಲ್ಡನ್ ಅವರ್ನಲ್ಲಿ ಚಿಕಿತ್ಸೆ ನೀಡದಿದ್ದರೆ ಸಾವು ಸಂಭವಿಸುವ ಅವಕಾಶ ಜಾಸ್ತಿಯಿರುತ್ತದೆ. ಈಗ ಪಾಲಿಟ್ರಾಮಾ ಕೇಂದ್ರವಿಲ್ಲದೆ ಹಲವು ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಪಾಲಿಟ್ರಾಮಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರವು ಈಗಾಗಲೇ ಭೂಮಿ ಮಂಜೂರು ಮಾಡಿದೆ. ಹಲವು ಭಾರಿ ಪಾಲಿಟ್ರಾಮಾ ಕೇಂದ್ರದ ವಿನ್ಯಾಸ ಕುರಿತಂತೆ ನೀಡಿರುವ ಪ್ರಸ್ತಾಪವನ್ನೂ ಪರಿಷ್ಕರಿಸಲಾಗಿದೆ. ಇದಕ್ಕೆ ಆಡಳಿತ ಮಂಡಳಿಯೂ ಒಪ್ಪಿಗೆ ನೀಡಿದೆ ಎಂದು ಮನವರಿಕೆ ಮಾಡಿದರು.
ನನ್ನ ಈ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…