ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್ ಕ್ಯಾಂಪಸ್ನಲ್ಲಿ ಸುಮಾರು 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಬೇಕು ಎಂದು ಸಂಸದ ಡಾ.ಸಿಎನ್ ಮಂಜುನಾಥ್ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಗೆ ಮನವಿ ಸಲ್ಲಿಸಿದ್ದಾರೆ.
ನಿಮ್ಹಾನ್ಸ್ ಆಸ್ಪತ್ರೆ ಆರಂಭವಾದಾಗ ಪ್ರತಿದಿನ 250 ರಿಂದ 300ರ ಹತ್ತಿರ ರೋಗಿಗಳು ಬರುತ್ತಿದ್ದರು. ಈಗ ಅದರ ಸಂಖ್ಯೆ 2500ಕ್ಕಿಂತಲೂ ಹೆಚ್ಚಾಗಿದೆ. ಆದ ಕಾರಣ ಪಾಲಿಟ್ರಾಮಾ ಕೇಂದ್ರ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ದೇಶದಲ್ಲಿ ಸಾವುಗಳು ಹೆಚ್ಚಾಗಿ ಸಂಭವಿಸುವ ಅಪಘಾತಗಳಲ್ಲಿ ರಸ್ತೆ ಅಪಘಾತವು ಒಂದಾಗಿದೆ. ರಸ್ತೆ ಅಪಘಾತಗಳಿಂದ ಸಾವಿಗೀಡಾಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಾಗುತ್ತಿರುವ ಸಾವುಗಳಿಗೆ ರಸ್ತೆ ಅಪಘಾತ ದೇಶದ ಅತಿದೊಡ್ಡ ಐದನೇ ಕಾರಣವಾಗಿದೆ.
ಅಪಘಾತದಲ್ಲಿ ಗಾಯವಾದವರಿಗೆ ಗೋಲ್ಡನ್ ಅವರ್ನಲ್ಲಿ ಚಿಕಿತ್ಸೆ ನೀಡದಿದ್ದರೆ ಸಾವು ಸಂಭವಿಸುವ ಅವಕಾಶ ಜಾಸ್ತಿಯಿರುತ್ತದೆ. ಈಗ ಪಾಲಿಟ್ರಾಮಾ ಕೇಂದ್ರವಿಲ್ಲದೆ ಹಲವು ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಪಾಲಿಟ್ರಾಮಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರವು ಈಗಾಗಲೇ ಭೂಮಿ ಮಂಜೂರು ಮಾಡಿದೆ. ಹಲವು ಭಾರಿ ಪಾಲಿಟ್ರಾಮಾ ಕೇಂದ್ರದ ವಿನ್ಯಾಸ ಕುರಿತಂತೆ ನೀಡಿರುವ ಪ್ರಸ್ತಾಪವನ್ನೂ ಪರಿಷ್ಕರಿಸಲಾಗಿದೆ. ಇದಕ್ಕೆ ಆಡಳಿತ ಮಂಡಳಿಯೂ ಒಪ್ಪಿಗೆ ನೀಡಿದೆ ಎಂದು ಮನವರಿಕೆ ಮಾಡಿದರು.
ನನ್ನ ಈ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…