ರಾಜ್ಯ

ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸುವಂತೆ ಡಾ.ಸಿ.ಎನ್.ಮಂಜುನಾಥ್ ಮನವಿ

ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್‌ ಕ್ಯಾಂಪಸ್‌ನಲ್ಲಿ ಸುಮಾರು 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಬೇಕು ಎಂದು ಸಂಸದ ಡಾ.ಸಿಎನ್‌ ಮಂಜುನಾಥ್‌ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಸಲ್ಲಿಸಿದ್ದಾರೆ.

ನಿಮ್ಹಾನ್ಸ್‌ ಆಸ್ಪತ್ರೆ ಆರಂಭವಾದಾಗ ಪ್ರತಿದಿನ 250 ರಿಂದ 300ರ ಹತ್ತಿರ ರೋಗಿಗಳು ಬರುತ್ತಿದ್ದರು. ಈಗ ಅದರ ಸಂಖ್ಯೆ 2500ಕ್ಕಿಂತಲೂ ಹೆಚ್ಚಾಗಿದೆ. ಆದ ಕಾರಣ ಪಾಲಿಟ್ರಾಮಾ ಕೇಂದ್ರ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ದೇಶದಲ್ಲಿ ಸಾವುಗಳು ಹೆಚ್ಚಾಗಿ ಸಂಭವಿಸುವ ಅಪಘಾತಗಳಲ್ಲಿ ರಸ್ತೆ ಅಪಘಾತವು ಒಂದಾಗಿದೆ. ರಸ್ತೆ ಅಪಘಾತಗಳಿಂದ ಸಾವಿಗೀಡಾಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಾಗುತ್ತಿರುವ ಸಾವುಗಳಿಗೆ ರಸ್ತೆ ಅಪಘಾತ ದೇಶದ ಅತಿದೊಡ್ಡ ಐದನೇ ಕಾರಣವಾಗಿದೆ.

ಅಪಘಾತದಲ್ಲಿ ಗಾಯವಾದವರಿಗೆ ಗೋಲ್ಡನ್‌ ಅವರ್‌ನಲ್ಲಿ ಚಿಕಿತ್ಸೆ ನೀಡದಿದ್ದರೆ ಸಾವು ಸಂಭವಿಸುವ ಅವಕಾಶ ಜಾಸ್ತಿಯಿರುತ್ತದೆ. ಈಗ ಪಾಲಿಟ್ರಾಮಾ ಕೇಂದ್ರವಿಲ್ಲದೆ ಹಲವು ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಪಾಲಿಟ್ರಾಮಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರವು ಈಗಾಗಲೇ ಭೂಮಿ ಮಂಜೂರು ಮಾಡಿದೆ. ಹಲವು ಭಾರಿ ಪಾಲಿಟ್ರಾಮಾ ಕೇಂದ್ರದ ವಿನ್ಯಾಸ ಕುರಿತಂತೆ ನೀಡಿರುವ ಪ್ರಸ್ತಾಪವನ್ನೂ ಪರಿಷ್ಕರಿಸಲಾಗಿದೆ. ಇದಕ್ಕೆ ಆಡಳಿತ ಮಂಡಳಿಯೂ ಒಪ್ಪಿಗೆ ನೀಡಿದೆ ಎಂದು ಮನವರಿಕೆ ಮಾಡಿದರು.

ನನ್ನ ಈ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

1 hour ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

1 hour ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

1 hour ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

2 hours ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

12 hours ago