ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಕ್ ಸ್ವತಂತ್ರ, ಪ್ರಜಾ ಪ್ರಭುತ್ವ ಅಂತ ಕಾಂಗ್ರೆಸ್ ಸರ್ಕಾರ ಭಾಷಣ ಮಾಡುತ್ತದೆ. ಆದರೆ ಜನರ ಹಾಗೂ ಸ್ವಾಮೀಜಿಗಳ ಅಭಿಪ್ರಾಯಕ್ಕೆ ಕಾನೂನಿನ ಕೊಕ್ಕೆ ಹಾಕುತ್ತಿದೆ ಎಂದು ಕಿಡಿಕಾರಿದರು.
ಭಾರತದ ಸಂವಿಧಾನದಲ್ಲಿ ವಾಕ್ ಸ್ವತಂತ್ರ ಮೂಲಭೂತ ಹಕ್ಕಾಗಿದೆ. ಒಬ್ಬೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಆ ಹೇಳಿಕೆಗಳು ತಪ್ಪು ಅಥವಾ ಸರಿ ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, ಚುನಾವಣೆ ಸಂದರ್ಭಗಳಲ್ಲಿ ಸ್ವಾಮೀಜಿಗಳು, ಸಾಧು ಸಂತರ ಪಾದಕ್ಕೆ ಬೀಳ್ತೀರಾ. ಆದರೆ ಅವರು ತಮ್ಮ ಅಭಿಪ್ರಾಯವನ್ನು ಹೇಳಿದರೆ ಅವರ ವಿರುದ್ಧವೇ ಎಫ್ಐಆರ್ ಹಾಕಿ ಅವರನ್ನು ಜೈಲಿಗೆ ಕಳುಹಿಸುತ್ತೀರಾ ಎಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…