ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಕ್ ಸ್ವತಂತ್ರ, ಪ್ರಜಾ ಪ್ರಭುತ್ವ ಅಂತ ಕಾಂಗ್ರೆಸ್ ಸರ್ಕಾರ ಭಾಷಣ ಮಾಡುತ್ತದೆ. ಆದರೆ ಜನರ ಹಾಗೂ ಸ್ವಾಮೀಜಿಗಳ ಅಭಿಪ್ರಾಯಕ್ಕೆ ಕಾನೂನಿನ ಕೊಕ್ಕೆ ಹಾಕುತ್ತಿದೆ ಎಂದು ಕಿಡಿಕಾರಿದರು.
ಭಾರತದ ಸಂವಿಧಾನದಲ್ಲಿ ವಾಕ್ ಸ್ವತಂತ್ರ ಮೂಲಭೂತ ಹಕ್ಕಾಗಿದೆ. ಒಬ್ಬೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಆ ಹೇಳಿಕೆಗಳು ತಪ್ಪು ಅಥವಾ ಸರಿ ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, ಚುನಾವಣೆ ಸಂದರ್ಭಗಳಲ್ಲಿ ಸ್ವಾಮೀಜಿಗಳು, ಸಾಧು ಸಂತರ ಪಾದಕ್ಕೆ ಬೀಳ್ತೀರಾ. ಆದರೆ ಅವರು ತಮ್ಮ ಅಭಿಪ್ರಾಯವನ್ನು ಹೇಳಿದರೆ ಅವರ ವಿರುದ್ಧವೇ ಎಫ್ಐಆರ್ ಹಾಕಿ ಅವರನ್ನು ಜೈಲಿಗೆ ಕಳುಹಿಸುತ್ತೀರಾ ಎಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…