ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಕ್ ಸ್ವತಂತ್ರ, ಪ್ರಜಾ ಪ್ರಭುತ್ವ ಅಂತ ಕಾಂಗ್ರೆಸ್ ಸರ್ಕಾರ ಭಾಷಣ ಮಾಡುತ್ತದೆ. ಆದರೆ ಜನರ ಹಾಗೂ ಸ್ವಾಮೀಜಿಗಳ ಅಭಿಪ್ರಾಯಕ್ಕೆ ಕಾನೂನಿನ ಕೊಕ್ಕೆ ಹಾಕುತ್ತಿದೆ ಎಂದು ಕಿಡಿಕಾರಿದರು.
ಭಾರತದ ಸಂವಿಧಾನದಲ್ಲಿ ವಾಕ್ ಸ್ವತಂತ್ರ ಮೂಲಭೂತ ಹಕ್ಕಾಗಿದೆ. ಒಬ್ಬೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಆ ಹೇಳಿಕೆಗಳು ತಪ್ಪು ಅಥವಾ ಸರಿ ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, ಚುನಾವಣೆ ಸಂದರ್ಭಗಳಲ್ಲಿ ಸ್ವಾಮೀಜಿಗಳು, ಸಾಧು ಸಂತರ ಪಾದಕ್ಕೆ ಬೀಳ್ತೀರಾ. ಆದರೆ ಅವರು ತಮ್ಮ ಅಭಿಪ್ರಾಯವನ್ನು ಹೇಳಿದರೆ ಅವರ ವಿರುದ್ಧವೇ ಎಫ್ಐಆರ್ ಹಾಕಿ ಅವರನ್ನು ಜೈಲಿಗೆ ಕಳುಹಿಸುತ್ತೀರಾ ಎಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…