ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ಧ ಇದ್ದರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸಂಸದ ಜಗದೀಶ್ ಶೆಟ್ಟರ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಕುಂಭಮೇಳಕ್ಕೆ ಹೋಗಿರುವುದರಲ್ಲಿ ತಪ್ಪೇನಿದೆ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ, ನಿಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಆಗ್ರಹಿಸಿದರು.
ಇನ್ನು ಕಾಂಗ್ರೆಸ್ಗೆ ಹಿಂದುಗಳ ಬಗ್ಗೆ ದ್ವೇಷ ಇದೆ. ಇದರಿಂದ ಕಾಂಗ್ರೆಸ್ ಉದ್ಧಾರ ಆಗಲ್ಲ. ಹಿಂದೂಗಳಿಲ್ಲದೇ ನೀವು ರಾಜಕಾರಣ ಮಾಡ್ತೀವಿ ಅಂದ್ರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನು ಕೀಳಾಗಿ ಕಾಣೋದೆ, ಅವರ ಅವನತಿಗೆ ಕಾರಣ ಎಂದಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಿಂದೂ ವಿರೋಧಿಯಾಗಿದೆ. ಈ ದೇಶ ಹಿಂದೂಗಳ ದೇಶ, ಹಿಂದೂ ರಾಷ್ಟ್ರ ಎನ್ನುವ ಪರಂಪರೆ ಇದೆ. ಕಮ್ಯುನಿಷ್ಟರು ಕೂಡ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಕಾಂಗ್ರೆಸ್ನವರು ಎಷ್ಟೋ ಜನ ಕುಂಭಮೇಳಕ್ಕೆ ಹೋಗಿದ್ದಾರೆ ಎಂದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…