ಉಡುಪಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಗರದಲ್ಲಿ ರಸ್ತೆ ಅಪಘಾತದಲ್ಲಿ ಹುತಾತ್ಮನಾದ ರಾಜ್ಯದ ಕುಂದಾಪುರ ತಾಲ್ಲೂಕಿನ ಬೀಜಾಡಿಯ ಯೋಧ ಅನೂಪ್ ಪಾರ್ಥೀವ ಶರೀರಕ್ಕೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಅಂತಿಮ ನಮನ ಸಲ್ಲಿಸಿದರು.
ದಕ್ಷಿಣ ಕನ್ನಡ ಸಂಸದ ಬಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಹುತಾತ್ಮ ಯೋಧ ಅನೂಪ್ ಅವರ ಪಾರ್ಥೀವ ಶರೀರ ಉಡುಪಿಗೆ ಆಗಮಿಸುತ್ತಿದ್ದಂತೆ ಸೇನಾಧಿಕಾರಿಗಳಿಂದ ಹಸ್ತಾಂತರ ಮಾಡಿಕೊಂಡು ಅಂತಿಮ ನಮನ ಸಲ್ಲಿಸಿದರು.
ಇಂದು (ಗುರುವಾರ) ಕುಂದಾಪುರ ತಾಲ್ಲೂಕಿನ ಬೀಜಾಡಿಪಡು ಸರ್ಕಾರಿ ಶಾಲಾ ಮೈದಾನದಲ್ಲಿ ಅನೂಪ್ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಿಡಲು ತಯಾರಿ ನಡೆಸಿದ್ದು, ಸಂಜೆ ವೇಳೆಗೆ ಸಕಲ ಸೇನೆ ಮತ್ತು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.
ಬಡತನದ ಕುಟುಂಬದಲ್ಲಿ ಹುಟ್ಟಿ ಬೆಳೆದ ಅನೂಪ್ ಭಾರತಾಂಬೆಯ ಸೇವೆ ಮಾಡಬೇಕೆಂದು ಹಠದಿಂದ ಸೇನೆ ಸೇರಿ 13 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. 2022 ರಲ್ಲಿ ವಿವಾಹವಾದ ಅನೂಪ್ಗೆ 2 ವರ್ಷದ ಪುಟ್ಟ ಮಗುವಿದೆ. ಜೊತೆಗೆ ಇಬ್ಬರು ಸಹೋದರಿಯರು, ಬಂಧು ಮಿತ್ರರು, ಗ್ರಾಮಸ್ಥರು ಹಾಗೂ ಗೆಳೆಯರನ್ನು ಬಿಟ್ಟು ಆಗಲಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…