ರಾಜ್ಯ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಈ ಪ್ರಕರಣವನ್ನು ಮುಲಾಜಿಲ್ಲದೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಂಸದ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು(ಮಾರ್ಚ್.‌13) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಯಾರನ್ನೋ ರಕ್ಷಿಸಲು ಹೋಗಿ ಸರ್ಕಾರ ಗೊಂದಲಕ್ಕೆ ಸಿಲುಕಿದೆ. ಕೇಸ್ ಅನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿ ನೋಡಿದರೇ ಸರ್ಕಾರ ವಿಫಲವಾಗಿದೆ ಎಂಬುದು ಎದ್ದು ಕಾಣುತ್ತದೆ. ಅಲ್ಲದೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಒತ್ತಡಕ್ಕೆ ಮಣಿದು ಹೇಳಿಕೆಗಳನ್ನು ನೀಡಬಾರದು. ಹೀಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ ಸರ್ಕಾರದ ನಾಯಕರು ಈ ಬಗ್ಗೆ ಒಬ್ಬೊಬರೂ ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇನ್ನು ಗೋಲ್ಡ್‌ ಸ್ಮಗ್ಲಿಂಗ್‌ ಸಂಬಂಧ ಮಾಧ್ಯಮಗಳಲ್ಲಿ ಕೆಲವರ ಹೆಸರು, ಸಚಿವರ ಕೈವಾಡ ಹಾಗೂ ರಾಜಕಾರಣಿಗಳ ಬಗ್ಗೆ ವರದಿ ಬರುತ್ತಿದೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ವೇತನ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡುವ ಮೂಲಕ ಹಗಲು ದರೋಡೆ ಮಾಡಿ, ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದೆ. ಅಲ್ಲದೇ ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೇನು ಕೆಲಸ? ಮಂತ್ರಿಗಳು ಮತ್ತು ಅಧಿಕಾರಿಗಳು ಕತ್ತೆ ಕಾಯುತ್ತಿದ್ದಾರಾ? ಎಂದು ಪ್ರಶ್ನಿಸಿದರು.

ಅರ್ಚನ ಎಸ್‌ ಎಸ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

3 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

3 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

3 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

3 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

3 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

3 hours ago