ರಾಜ್ಯ

ಲೇಖಕ ಎಸ್‌.ಉಮೇಶ್‌ ರಚಿಸಿರುವ ʼಅಯೋಧ್ಯಾʼ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್‌ ಸಿಂಹ!

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ.

ನಗರದ ಜಲದರ್ಶಿನಿಯಲ್ಲಿರುವ ಸಂಸದರ ಕಚೇರಿಯಲ್ಲಿ ಲೇಖಕ ಎಸ್‌.ಉಮೇಶ್‌, ಪತ್ರಕರ್ತ ರವೀಂದ್ರ ಜೋಶಿ ಅವರ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ ಸಿಂಹ ಅವರು, ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.

ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಲೇಖಕ ಉಮೇಶ್‌, ಈ ಪುಸ್ತಕಕ್ಕಾಗಿ ಸತತ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿದ್ದೇನೆ. ಅಯೋಧ್ಯಾ ಇತಿಹಾಸದ ಬಗ್ಗೆ ಪುಸ್ತಕ ಬರೆಯುವ ಆಲೋಚನೆ ಬಂದ ಮೊದಲಿಗೆ, ಉಡುಪಿಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಈ ಬಗ್ಗೆ ತಿಳಿಸಿದೆ. ಕೂಡಲೇ ಅಯೋಧ್ಯಾ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಮಹನೀಯರ ಸಂಪರ್ಕವನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.

ಹಿಂದೆ ನಡೆದದ್ದು ಯುವ ಜನತೆಗೆ ತಿಳಿಯಬೇಕು!: ಇಂದಿನ ಯುವಜನತೆಗೆ ೧೯೯೨ರಿಂದ ಈಚೆಗೆ ರಾಮ ಮಂದಿರ ಅಥವ ಅಯೋಧ್ಯೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ತಿಳಿದಿರುತ್ತದೆ. ಆದರೇ ಅದಕ್ಕೂ ಹಿಂದೆ ಸುಮಾರು ೫೦೦ವರ್ಷಗಳ ಕಾಲ ಆಯೋಧ್ಯೆಯ ಸುತ್ತ ನಡೆದ ಅನೇಕ ರೋಚಕ ಘಟನಾವಳಿಗಳು ಹಾಗೂ ಬೆಳವಣಿಗೆಗಳ ಬಗ್ಗೆ ಅಷ್ಟಾಗಿ ತಿಳಿದಿರಲಿಕ್ಕಿಲ್ಲ. ಹೀಗಾಗಿ, ಆ ಸಂದರ್ಭದಲ್ಲಿ ನಡೆದ ಹೋರಾಟದ ಬಗ್ಗೆ ಈ ಪುಸ್ತಕದಲ್ಲಿ ದಾಖಲಿಸಿದ್ದೇನೆ ಎಂದರು.

ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ʼಅಯೋಧ್ಯೆʼ ಪುಸ್ತಕವನ್ನು ಬಿಡುಗಡೆ ಮಾಡಿಸಲಾಗುವುದು ಎಂದು ಉಮೇಶ್‌ ತಿಳಿಸಿದರು.

ಲೇಖನದ ಮೂಲಕ ರಾಮನ ಸೇವೆ: ರಾಮ ಮಂದಿರ ಉದ್ಘಾಟನೆಗೆ ಪ್ರಪಂಚದಾದ್ಯಂತ ರಾಮ ಭಕ್ತು ಕಾತುರದಿಂದ ಕಾಯುತ್ತಿದ್ದಾರೆ. ದೇಶ-ವಿದೇಶಗಳಿಂದ ರಾಮ ಭಕ್ತರು ಎತಾಶಕ್ತಿ ಸೇವೆ ಮಾಡುತ್ತಿದ್ದಾರೆ. ಈ ಮಧ್ಯೆ ಧಾತ್ರಿ ಪ್ರಕಾಶನದಿಂದ ಸಾಹಿತ್ಯದ ಮೂಲಕ ರಾಮನಿಗೆ ಸೇವೆ ಸಲ್ಲಿಸುತ್ತಿದೆ. ಅಷೇ ಅಲ್ಲದೆ, ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ʼಅಯೋಧ್ಯಾʼ ಪುಸ್ತಕವನ್ನು ಬಿಡುಗಡೆ ಮಾಡುವ ಉದ್ದೇಶ ಪ್ರಕಾಶನ ಹೊಂದಿದೆ ಎಂದು ಲೇಖಕ ಉಮೇಶ್‌ ತಿಳಿಸಿದರು.

andolanait

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

3 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

4 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

4 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

4 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

4 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

5 hours ago