ರಾಜ್ಯ

ಲೇಖಕ ಎಸ್‌.ಉಮೇಶ್‌ ರಚಿಸಿರುವ ʼಅಯೋಧ್ಯಾʼ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್‌ ಸಿಂಹ!

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ.

ನಗರದ ಜಲದರ್ಶಿನಿಯಲ್ಲಿರುವ ಸಂಸದರ ಕಚೇರಿಯಲ್ಲಿ ಲೇಖಕ ಎಸ್‌.ಉಮೇಶ್‌, ಪತ್ರಕರ್ತ ರವೀಂದ್ರ ಜೋಶಿ ಅವರ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ ಸಿಂಹ ಅವರು, ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.

ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಲೇಖಕ ಉಮೇಶ್‌, ಈ ಪುಸ್ತಕಕ್ಕಾಗಿ ಸತತ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿದ್ದೇನೆ. ಅಯೋಧ್ಯಾ ಇತಿಹಾಸದ ಬಗ್ಗೆ ಪುಸ್ತಕ ಬರೆಯುವ ಆಲೋಚನೆ ಬಂದ ಮೊದಲಿಗೆ, ಉಡುಪಿಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಈ ಬಗ್ಗೆ ತಿಳಿಸಿದೆ. ಕೂಡಲೇ ಅಯೋಧ್ಯಾ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಮಹನೀಯರ ಸಂಪರ್ಕವನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.

ಹಿಂದೆ ನಡೆದದ್ದು ಯುವ ಜನತೆಗೆ ತಿಳಿಯಬೇಕು!: ಇಂದಿನ ಯುವಜನತೆಗೆ ೧೯೯೨ರಿಂದ ಈಚೆಗೆ ರಾಮ ಮಂದಿರ ಅಥವ ಅಯೋಧ್ಯೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ತಿಳಿದಿರುತ್ತದೆ. ಆದರೇ ಅದಕ್ಕೂ ಹಿಂದೆ ಸುಮಾರು ೫೦೦ವರ್ಷಗಳ ಕಾಲ ಆಯೋಧ್ಯೆಯ ಸುತ್ತ ನಡೆದ ಅನೇಕ ರೋಚಕ ಘಟನಾವಳಿಗಳು ಹಾಗೂ ಬೆಳವಣಿಗೆಗಳ ಬಗ್ಗೆ ಅಷ್ಟಾಗಿ ತಿಳಿದಿರಲಿಕ್ಕಿಲ್ಲ. ಹೀಗಾಗಿ, ಆ ಸಂದರ್ಭದಲ್ಲಿ ನಡೆದ ಹೋರಾಟದ ಬಗ್ಗೆ ಈ ಪುಸ್ತಕದಲ್ಲಿ ದಾಖಲಿಸಿದ್ದೇನೆ ಎಂದರು.

ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ʼಅಯೋಧ್ಯೆʼ ಪುಸ್ತಕವನ್ನು ಬಿಡುಗಡೆ ಮಾಡಿಸಲಾಗುವುದು ಎಂದು ಉಮೇಶ್‌ ತಿಳಿಸಿದರು.

ಲೇಖನದ ಮೂಲಕ ರಾಮನ ಸೇವೆ: ರಾಮ ಮಂದಿರ ಉದ್ಘಾಟನೆಗೆ ಪ್ರಪಂಚದಾದ್ಯಂತ ರಾಮ ಭಕ್ತು ಕಾತುರದಿಂದ ಕಾಯುತ್ತಿದ್ದಾರೆ. ದೇಶ-ವಿದೇಶಗಳಿಂದ ರಾಮ ಭಕ್ತರು ಎತಾಶಕ್ತಿ ಸೇವೆ ಮಾಡುತ್ತಿದ್ದಾರೆ. ಈ ಮಧ್ಯೆ ಧಾತ್ರಿ ಪ್ರಕಾಶನದಿಂದ ಸಾಹಿತ್ಯದ ಮೂಲಕ ರಾಮನಿಗೆ ಸೇವೆ ಸಲ್ಲಿಸುತ್ತಿದೆ. ಅಷೇ ಅಲ್ಲದೆ, ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ʼಅಯೋಧ್ಯಾʼ ಪುಸ್ತಕವನ್ನು ಬಿಡುಗಡೆ ಮಾಡುವ ಉದ್ದೇಶ ಪ್ರಕಾಶನ ಹೊಂದಿದೆ ಎಂದು ಲೇಖಕ ಉಮೇಶ್‌ ತಿಳಿಸಿದರು.

andolanait

Recent Posts

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

11 mins ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

24 mins ago

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

38 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

56 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

1 hour ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

2 hours ago