ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್.ಉಮೇಶ್ ಬರೆದಿರುವ ʼಅಯೋಧ್ಯಾʼ ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬಿಡುಗಡೆ ಮಾಡಿದ್ದಾರೆ.
ನಗರದ ಜಲದರ್ಶಿನಿಯಲ್ಲಿರುವ ಸಂಸದರ ಕಚೇರಿಯಲ್ಲಿ ಲೇಖಕ ಎಸ್.ಉಮೇಶ್, ಪತ್ರಕರ್ತ ರವೀಂದ್ರ ಜೋಶಿ ಅವರ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.
ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಲೇಖಕ ಉಮೇಶ್, ಈ ಪುಸ್ತಕಕ್ಕಾಗಿ ಸತತ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿದ್ದೇನೆ. ಅಯೋಧ್ಯಾ ಇತಿಹಾಸದ ಬಗ್ಗೆ ಪುಸ್ತಕ ಬರೆಯುವ ಆಲೋಚನೆ ಬಂದ ಮೊದಲಿಗೆ, ಉಡುಪಿಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಈ ಬಗ್ಗೆ ತಿಳಿಸಿದೆ. ಕೂಡಲೇ ಅಯೋಧ್ಯಾ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಮಹನೀಯರ ಸಂಪರ್ಕವನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.
ಹಿಂದೆ ನಡೆದದ್ದು ಯುವ ಜನತೆಗೆ ತಿಳಿಯಬೇಕು!: ಇಂದಿನ ಯುವಜನತೆಗೆ ೧೯೯೨ರಿಂದ ಈಚೆಗೆ ರಾಮ ಮಂದಿರ ಅಥವ ಅಯೋಧ್ಯೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ತಿಳಿದಿರುತ್ತದೆ. ಆದರೇ ಅದಕ್ಕೂ ಹಿಂದೆ ಸುಮಾರು ೫೦೦ವರ್ಷಗಳ ಕಾಲ ಆಯೋಧ್ಯೆಯ ಸುತ್ತ ನಡೆದ ಅನೇಕ ರೋಚಕ ಘಟನಾವಳಿಗಳು ಹಾಗೂ ಬೆಳವಣಿಗೆಗಳ ಬಗ್ಗೆ ಅಷ್ಟಾಗಿ ತಿಳಿದಿರಲಿಕ್ಕಿಲ್ಲ. ಹೀಗಾಗಿ, ಆ ಸಂದರ್ಭದಲ್ಲಿ ನಡೆದ ಹೋರಾಟದ ಬಗ್ಗೆ ಈ ಪುಸ್ತಕದಲ್ಲಿ ದಾಖಲಿಸಿದ್ದೇನೆ ಎಂದರು.
ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ʼಅಯೋಧ್ಯೆʼ ಪುಸ್ತಕವನ್ನು ಬಿಡುಗಡೆ ಮಾಡಿಸಲಾಗುವುದು ಎಂದು ಉಮೇಶ್ ತಿಳಿಸಿದರು.
ಲೇಖನದ ಮೂಲಕ ರಾಮನ ಸೇವೆ: ರಾಮ ಮಂದಿರ ಉದ್ಘಾಟನೆಗೆ ಪ್ರಪಂಚದಾದ್ಯಂತ ರಾಮ ಭಕ್ತು ಕಾತುರದಿಂದ ಕಾಯುತ್ತಿದ್ದಾರೆ. ದೇಶ-ವಿದೇಶಗಳಿಂದ ರಾಮ ಭಕ್ತರು ಎತಾಶಕ್ತಿ ಸೇವೆ ಮಾಡುತ್ತಿದ್ದಾರೆ. ಈ ಮಧ್ಯೆ ಧಾತ್ರಿ ಪ್ರಕಾಶನದಿಂದ ಸಾಹಿತ್ಯದ ಮೂಲಕ ರಾಮನಿಗೆ ಸೇವೆ ಸಲ್ಲಿಸುತ್ತಿದೆ. ಅಷೇ ಅಲ್ಲದೆ, ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ʼಅಯೋಧ್ಯಾʼ ಪುಸ್ತಕವನ್ನು ಬಿಡುಗಡೆ ಮಾಡುವ ಉದ್ದೇಶ ಪ್ರಕಾಶನ ಹೊಂದಿದೆ ಎಂದು ಲೇಖಕ ಉಮೇಶ್ ತಿಳಿಸಿದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…