ರಾಜ್ಯ

ಲೇಖಕ ಎಸ್‌.ಉಮೇಶ್‌ ರಚಿಸಿರುವ ʼಅಯೋಧ್ಯಾʼ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್‌ ಸಿಂಹ!

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ.

ನಗರದ ಜಲದರ್ಶಿನಿಯಲ್ಲಿರುವ ಸಂಸದರ ಕಚೇರಿಯಲ್ಲಿ ಲೇಖಕ ಎಸ್‌.ಉಮೇಶ್‌, ಪತ್ರಕರ್ತ ರವೀಂದ್ರ ಜೋಶಿ ಅವರ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ ಸಿಂಹ ಅವರು, ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.

ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಲೇಖಕ ಉಮೇಶ್‌, ಈ ಪುಸ್ತಕಕ್ಕಾಗಿ ಸತತ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿದ್ದೇನೆ. ಅಯೋಧ್ಯಾ ಇತಿಹಾಸದ ಬಗ್ಗೆ ಪುಸ್ತಕ ಬರೆಯುವ ಆಲೋಚನೆ ಬಂದ ಮೊದಲಿಗೆ, ಉಡುಪಿಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಈ ಬಗ್ಗೆ ತಿಳಿಸಿದೆ. ಕೂಡಲೇ ಅಯೋಧ್ಯಾ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಮಹನೀಯರ ಸಂಪರ್ಕವನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.

ಹಿಂದೆ ನಡೆದದ್ದು ಯುವ ಜನತೆಗೆ ತಿಳಿಯಬೇಕು!: ಇಂದಿನ ಯುವಜನತೆಗೆ ೧೯೯೨ರಿಂದ ಈಚೆಗೆ ರಾಮ ಮಂದಿರ ಅಥವ ಅಯೋಧ್ಯೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ತಿಳಿದಿರುತ್ತದೆ. ಆದರೇ ಅದಕ್ಕೂ ಹಿಂದೆ ಸುಮಾರು ೫೦೦ವರ್ಷಗಳ ಕಾಲ ಆಯೋಧ್ಯೆಯ ಸುತ್ತ ನಡೆದ ಅನೇಕ ರೋಚಕ ಘಟನಾವಳಿಗಳು ಹಾಗೂ ಬೆಳವಣಿಗೆಗಳ ಬಗ್ಗೆ ಅಷ್ಟಾಗಿ ತಿಳಿದಿರಲಿಕ್ಕಿಲ್ಲ. ಹೀಗಾಗಿ, ಆ ಸಂದರ್ಭದಲ್ಲಿ ನಡೆದ ಹೋರಾಟದ ಬಗ್ಗೆ ಈ ಪುಸ್ತಕದಲ್ಲಿ ದಾಖಲಿಸಿದ್ದೇನೆ ಎಂದರು.

ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ʼಅಯೋಧ್ಯೆʼ ಪುಸ್ತಕವನ್ನು ಬಿಡುಗಡೆ ಮಾಡಿಸಲಾಗುವುದು ಎಂದು ಉಮೇಶ್‌ ತಿಳಿಸಿದರು.

ಲೇಖನದ ಮೂಲಕ ರಾಮನ ಸೇವೆ: ರಾಮ ಮಂದಿರ ಉದ್ಘಾಟನೆಗೆ ಪ್ರಪಂಚದಾದ್ಯಂತ ರಾಮ ಭಕ್ತು ಕಾತುರದಿಂದ ಕಾಯುತ್ತಿದ್ದಾರೆ. ದೇಶ-ವಿದೇಶಗಳಿಂದ ರಾಮ ಭಕ್ತರು ಎತಾಶಕ್ತಿ ಸೇವೆ ಮಾಡುತ್ತಿದ್ದಾರೆ. ಈ ಮಧ್ಯೆ ಧಾತ್ರಿ ಪ್ರಕಾಶನದಿಂದ ಸಾಹಿತ್ಯದ ಮೂಲಕ ರಾಮನಿಗೆ ಸೇವೆ ಸಲ್ಲಿಸುತ್ತಿದೆ. ಅಷೇ ಅಲ್ಲದೆ, ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ʼಅಯೋಧ್ಯಾʼ ಪುಸ್ತಕವನ್ನು ಬಿಡುಗಡೆ ಮಾಡುವ ಉದ್ದೇಶ ಪ್ರಕಾಶನ ಹೊಂದಿದೆ ಎಂದು ಲೇಖಕ ಉಮೇಶ್‌ ತಿಳಿಸಿದರು.

andolanait

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

46 mins ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

55 mins ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

2 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

4 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

4 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

8 hours ago