ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್.ಉಮೇಶ್ ಬರೆದಿರುವ ʼಅಯೋಧ್ಯಾʼ ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬಿಡುಗಡೆ ಮಾಡಿದ್ದಾರೆ.
ನಗರದ ಜಲದರ್ಶಿನಿಯಲ್ಲಿರುವ ಸಂಸದರ ಕಚೇರಿಯಲ್ಲಿ ಲೇಖಕ ಎಸ್.ಉಮೇಶ್, ಪತ್ರಕರ್ತ ರವೀಂದ್ರ ಜೋಶಿ ಅವರ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.
ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಲೇಖಕ ಉಮೇಶ್, ಈ ಪುಸ್ತಕಕ್ಕಾಗಿ ಸತತ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿದ್ದೇನೆ. ಅಯೋಧ್ಯಾ ಇತಿಹಾಸದ ಬಗ್ಗೆ ಪುಸ್ತಕ ಬರೆಯುವ ಆಲೋಚನೆ ಬಂದ ಮೊದಲಿಗೆ, ಉಡುಪಿಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಈ ಬಗ್ಗೆ ತಿಳಿಸಿದೆ. ಕೂಡಲೇ ಅಯೋಧ್ಯಾ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಮಹನೀಯರ ಸಂಪರ್ಕವನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.
ಹಿಂದೆ ನಡೆದದ್ದು ಯುವ ಜನತೆಗೆ ತಿಳಿಯಬೇಕು!: ಇಂದಿನ ಯುವಜನತೆಗೆ ೧೯೯೨ರಿಂದ ಈಚೆಗೆ ರಾಮ ಮಂದಿರ ಅಥವ ಅಯೋಧ್ಯೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ತಿಳಿದಿರುತ್ತದೆ. ಆದರೇ ಅದಕ್ಕೂ ಹಿಂದೆ ಸುಮಾರು ೫೦೦ವರ್ಷಗಳ ಕಾಲ ಆಯೋಧ್ಯೆಯ ಸುತ್ತ ನಡೆದ ಅನೇಕ ರೋಚಕ ಘಟನಾವಳಿಗಳು ಹಾಗೂ ಬೆಳವಣಿಗೆಗಳ ಬಗ್ಗೆ ಅಷ್ಟಾಗಿ ತಿಳಿದಿರಲಿಕ್ಕಿಲ್ಲ. ಹೀಗಾಗಿ, ಆ ಸಂದರ್ಭದಲ್ಲಿ ನಡೆದ ಹೋರಾಟದ ಬಗ್ಗೆ ಈ ಪುಸ್ತಕದಲ್ಲಿ ದಾಖಲಿಸಿದ್ದೇನೆ ಎಂದರು.
ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ʼಅಯೋಧ್ಯೆʼ ಪುಸ್ತಕವನ್ನು ಬಿಡುಗಡೆ ಮಾಡಿಸಲಾಗುವುದು ಎಂದು ಉಮೇಶ್ ತಿಳಿಸಿದರು.
ಲೇಖನದ ಮೂಲಕ ರಾಮನ ಸೇವೆ: ರಾಮ ಮಂದಿರ ಉದ್ಘಾಟನೆಗೆ ಪ್ರಪಂಚದಾದ್ಯಂತ ರಾಮ ಭಕ್ತು ಕಾತುರದಿಂದ ಕಾಯುತ್ತಿದ್ದಾರೆ. ದೇಶ-ವಿದೇಶಗಳಿಂದ ರಾಮ ಭಕ್ತರು ಎತಾಶಕ್ತಿ ಸೇವೆ ಮಾಡುತ್ತಿದ್ದಾರೆ. ಈ ಮಧ್ಯೆ ಧಾತ್ರಿ ಪ್ರಕಾಶನದಿಂದ ಸಾಹಿತ್ಯದ ಮೂಲಕ ರಾಮನಿಗೆ ಸೇವೆ ಸಲ್ಲಿಸುತ್ತಿದೆ. ಅಷೇ ಅಲ್ಲದೆ, ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ʼಅಯೋಧ್ಯಾʼ ಪುಸ್ತಕವನ್ನು ಬಿಡುಗಡೆ ಮಾಡುವ ಉದ್ದೇಶ ಪ್ರಕಾಶನ ಹೊಂದಿದೆ ಎಂದು ಲೇಖಕ ಉಮೇಶ್ ತಿಳಿಸಿದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…