ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್.ಉಮೇಶ್ ಬರೆದಿರುವ ʼಅಯೋಧ್ಯಾʼ ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬಿಡುಗಡೆ ಮಾಡಿದ್ದಾರೆ.
ನಗರದ ಜಲದರ್ಶಿನಿಯಲ್ಲಿರುವ ಸಂಸದರ ಕಚೇರಿಯಲ್ಲಿ ಲೇಖಕ ಎಸ್.ಉಮೇಶ್, ಪತ್ರಕರ್ತ ರವೀಂದ್ರ ಜೋಶಿ ಅವರ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.
ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಲೇಖಕ ಉಮೇಶ್, ಈ ಪುಸ್ತಕಕ್ಕಾಗಿ ಸತತ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿದ್ದೇನೆ. ಅಯೋಧ್ಯಾ ಇತಿಹಾಸದ ಬಗ್ಗೆ ಪುಸ್ತಕ ಬರೆಯುವ ಆಲೋಚನೆ ಬಂದ ಮೊದಲಿಗೆ, ಉಡುಪಿಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಈ ಬಗ್ಗೆ ತಿಳಿಸಿದೆ. ಕೂಡಲೇ ಅಯೋಧ್ಯಾ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಮಹನೀಯರ ಸಂಪರ್ಕವನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.
ಹಿಂದೆ ನಡೆದದ್ದು ಯುವ ಜನತೆಗೆ ತಿಳಿಯಬೇಕು!: ಇಂದಿನ ಯುವಜನತೆಗೆ ೧೯೯೨ರಿಂದ ಈಚೆಗೆ ರಾಮ ಮಂದಿರ ಅಥವ ಅಯೋಧ್ಯೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ತಿಳಿದಿರುತ್ತದೆ. ಆದರೇ ಅದಕ್ಕೂ ಹಿಂದೆ ಸುಮಾರು ೫೦೦ವರ್ಷಗಳ ಕಾಲ ಆಯೋಧ್ಯೆಯ ಸುತ್ತ ನಡೆದ ಅನೇಕ ರೋಚಕ ಘಟನಾವಳಿಗಳು ಹಾಗೂ ಬೆಳವಣಿಗೆಗಳ ಬಗ್ಗೆ ಅಷ್ಟಾಗಿ ತಿಳಿದಿರಲಿಕ್ಕಿಲ್ಲ. ಹೀಗಾಗಿ, ಆ ಸಂದರ್ಭದಲ್ಲಿ ನಡೆದ ಹೋರಾಟದ ಬಗ್ಗೆ ಈ ಪುಸ್ತಕದಲ್ಲಿ ದಾಖಲಿಸಿದ್ದೇನೆ ಎಂದರು.
ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ʼಅಯೋಧ್ಯೆʼ ಪುಸ್ತಕವನ್ನು ಬಿಡುಗಡೆ ಮಾಡಿಸಲಾಗುವುದು ಎಂದು ಉಮೇಶ್ ತಿಳಿಸಿದರು.
ಲೇಖನದ ಮೂಲಕ ರಾಮನ ಸೇವೆ: ರಾಮ ಮಂದಿರ ಉದ್ಘಾಟನೆಗೆ ಪ್ರಪಂಚದಾದ್ಯಂತ ರಾಮ ಭಕ್ತು ಕಾತುರದಿಂದ ಕಾಯುತ್ತಿದ್ದಾರೆ. ದೇಶ-ವಿದೇಶಗಳಿಂದ ರಾಮ ಭಕ್ತರು ಎತಾಶಕ್ತಿ ಸೇವೆ ಮಾಡುತ್ತಿದ್ದಾರೆ. ಈ ಮಧ್ಯೆ ಧಾತ್ರಿ ಪ್ರಕಾಶನದಿಂದ ಸಾಹಿತ್ಯದ ಮೂಲಕ ರಾಮನಿಗೆ ಸೇವೆ ಸಲ್ಲಿಸುತ್ತಿದೆ. ಅಷೇ ಅಲ್ಲದೆ, ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ʼಅಯೋಧ್ಯಾʼ ಪುಸ್ತಕವನ್ನು ಬಿಡುಗಡೆ ಮಾಡುವ ಉದ್ದೇಶ ಪ್ರಕಾಶನ ಹೊಂದಿದೆ ಎಂದು ಲೇಖಕ ಉಮೇಶ್ ತಿಳಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…