ರಾಜ್ಯ

ಲೇಖಕ ಎಸ್‌.ಉಮೇಶ್‌ ರಚಿಸಿರುವ ʼಅಯೋಧ್ಯಾʼ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್‌ ಸಿಂಹ!

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ.

ನಗರದ ಜಲದರ್ಶಿನಿಯಲ್ಲಿರುವ ಸಂಸದರ ಕಚೇರಿಯಲ್ಲಿ ಲೇಖಕ ಎಸ್‌.ಉಮೇಶ್‌, ಪತ್ರಕರ್ತ ರವೀಂದ್ರ ಜೋಶಿ ಅವರ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ ಸಿಂಹ ಅವರು, ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.

ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಲೇಖಕ ಉಮೇಶ್‌, ಈ ಪುಸ್ತಕಕ್ಕಾಗಿ ಸತತ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿದ್ದೇನೆ. ಅಯೋಧ್ಯಾ ಇತಿಹಾಸದ ಬಗ್ಗೆ ಪುಸ್ತಕ ಬರೆಯುವ ಆಲೋಚನೆ ಬಂದ ಮೊದಲಿಗೆ, ಉಡುಪಿಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಈ ಬಗ್ಗೆ ತಿಳಿಸಿದೆ. ಕೂಡಲೇ ಅಯೋಧ್ಯಾ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಮಹನೀಯರ ಸಂಪರ್ಕವನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.

ಹಿಂದೆ ನಡೆದದ್ದು ಯುವ ಜನತೆಗೆ ತಿಳಿಯಬೇಕು!: ಇಂದಿನ ಯುವಜನತೆಗೆ ೧೯೯೨ರಿಂದ ಈಚೆಗೆ ರಾಮ ಮಂದಿರ ಅಥವ ಅಯೋಧ್ಯೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ತಿಳಿದಿರುತ್ತದೆ. ಆದರೇ ಅದಕ್ಕೂ ಹಿಂದೆ ಸುಮಾರು ೫೦೦ವರ್ಷಗಳ ಕಾಲ ಆಯೋಧ್ಯೆಯ ಸುತ್ತ ನಡೆದ ಅನೇಕ ರೋಚಕ ಘಟನಾವಳಿಗಳು ಹಾಗೂ ಬೆಳವಣಿಗೆಗಳ ಬಗ್ಗೆ ಅಷ್ಟಾಗಿ ತಿಳಿದಿರಲಿಕ್ಕಿಲ್ಲ. ಹೀಗಾಗಿ, ಆ ಸಂದರ್ಭದಲ್ಲಿ ನಡೆದ ಹೋರಾಟದ ಬಗ್ಗೆ ಈ ಪುಸ್ತಕದಲ್ಲಿ ದಾಖಲಿಸಿದ್ದೇನೆ ಎಂದರು.

ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ʼಅಯೋಧ್ಯೆʼ ಪುಸ್ತಕವನ್ನು ಬಿಡುಗಡೆ ಮಾಡಿಸಲಾಗುವುದು ಎಂದು ಉಮೇಶ್‌ ತಿಳಿಸಿದರು.

ಲೇಖನದ ಮೂಲಕ ರಾಮನ ಸೇವೆ: ರಾಮ ಮಂದಿರ ಉದ್ಘಾಟನೆಗೆ ಪ್ರಪಂಚದಾದ್ಯಂತ ರಾಮ ಭಕ್ತು ಕಾತುರದಿಂದ ಕಾಯುತ್ತಿದ್ದಾರೆ. ದೇಶ-ವಿದೇಶಗಳಿಂದ ರಾಮ ಭಕ್ತರು ಎತಾಶಕ್ತಿ ಸೇವೆ ಮಾಡುತ್ತಿದ್ದಾರೆ. ಈ ಮಧ್ಯೆ ಧಾತ್ರಿ ಪ್ರಕಾಶನದಿಂದ ಸಾಹಿತ್ಯದ ಮೂಲಕ ರಾಮನಿಗೆ ಸೇವೆ ಸಲ್ಲಿಸುತ್ತಿದೆ. ಅಷೇ ಅಲ್ಲದೆ, ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ʼಅಯೋಧ್ಯಾʼ ಪುಸ್ತಕವನ್ನು ಬಿಡುಗಡೆ ಮಾಡುವ ಉದ್ದೇಶ ಪ್ರಕಾಶನ ಹೊಂದಿದೆ ಎಂದು ಲೇಖಕ ಉಮೇಶ್‌ ತಿಳಿಸಿದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

6 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago