ರಾಜ್ಯ

ಗಾಲಿ ಜನಾರ್ದನರೆಡ್ಡಿ ವಿರುದ್ಧ ದೂರು ದಾಖಲಿಸಿದ ಸಂಸದ ಶಶಿಕಾಂತ ಸೆಂಥಿಲ್‌

ಬೆಂಗಳೂರು : ಧರ್ಮಸ್ಥಳದ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿರುವ ಶಾಸಕ ಗಾಲಿ ಜನಾರ್ದನರೆಡ್ಡಿ ವಿರುದ್ಧ ತಮಿಳುನಾಡಿನ ತಿರುವಳ್ಳೂರ್ ಕ್ಷೇತ್ರದ ಸಂಸದ ಶಶಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಅವರು, ನ್ಯಾಯಾಲಯಕ್ಕೆ ಖಾಸಗಿ ದೂರಿನ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ ಸಾಕ್ಷ್ಯ ಒದಗಿಸುವಂತೆ ಜನಾರ್ದನ ರೆಡ್ಡಿಗೆ ಒತ್ತಾಯಿಸಿದ್ದಾರೆ.

ಇದನ್ನು ಓದಿ:ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಚಲೋ ಮಾಡ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾವತಿ ಶಾಸಕರಾಗಿರುವ ಗಾಲಿ ಜನಾರ್ದನರೆಡ್ಡಿ ತಮ್ಮ ವಿರುದ್ಧ ಮಾಡಿರುವ ಆರೋಪಗಳು ಬಾಲಿಶತನದಿಂದ ಕೂಡಿವೆ. ಅವುಗಳಿಗೆ ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಎಂದು ನಾನು ನಿರ್ಲಕ್ಷಿಸಿದ್ದೆ. ಜೊತೆಗೆ ಸಂಸದನಾದ ನನಗೆ ಇಂತಹ ವಿಚಾರಗಳಿಗಿಂತಲೂ ಬೇರೆ ಮಹತ್ವದ ವಿಷಯಗಳಿದ್ದವು ಎಂದಿದ್ದಾರೆ.

ಧರ್ಮಸ್ಥಳದ ವಿಚಾರವಾಗಿ ವಾಟ್ಸ್‌ಪ್ ನೋಡಿಕೊಂಡು ಜನಾರ್ದನರೆಡ್ಡಿ ಮಾತನಾಡಿದಂತಿದೆ. ನನ್ನನ್ನು ಮಾಸ್ಟರ್ ಮೈಂಡ್, ಸ್ಕ್ರಿಪ್ಟ್ ರೈಟರ್ ಎಂದೆಲ್ಲಾ ಬಿಂಬಿಸಿದ್ದಾರೆ. ಅವರ ಹೇಳಿಕೆಯ ಬಳಿಕ ದಿನಕ್ಕೊಂದು ವರದಿ ಬಿತ್ತರವಾಗುತ್ತಿದ್ದು, ನನ್ನ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನಗಳಾಗುತ್ತಿವೆ. ಈ ಹಂತದಲ್ಲಿ ಪ್ರತಿಕ್ರಿಯಿಸಲೇಬೇಕಾಗಿರುವುದು ಅನಿವಾರ್ಯವಾಗಲಿದೆ ಎಂದು ಹೇಳಿದರು.‌

ಕರ್ನಾಟಕ ನನಗೆ ಹೊಸದಲ್ಲ. ಐಎಎಸ್ ಅಧಿಕಾರಿಯಾಗಿ ಇಲ್ಲಿ 10 ವರ್ಷ ಕೆಲಸ ಮಾಡಿದ್ದೇನೆ. ನನ್ನ ಬಗ್ಗೆ ಎಲ್ಲರಿಗೂ ಅರಿವಿದೆ. ತಮ್ಮ ವಿರುದ್ಧ ಆರೋಪ ಮಾಡಿರುವ ಜನಾರ್ದನರೆಡ್ಡಿ ಎಂತಹ ವ್ಯಕ್ತಿ ಎಂದು ಎಲ್ಲರಿಗೂ ಗೊತ್ತಿದೆ. ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ ಆರೋಪಕ್ಕಾಗಿ 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕರ್ನಾಟಕದ ಹೆಸರನ್ನು ಇಡೀ ದೇಶದಲ್ಲಿ ಕೆಡಿಸಿದ್ದಾರೆ. ಇಂತಹ ವ್ಯಕ್ತಿಯ ಆರೋಪಗಳನ್ನು ಹರಡಲು ಬಿಟ್ಟರೆ ನನಗೂ ಸಮಸ್ಯೆಯಾಗಲಿದೆ, ಸಾರ್ವಜನಿಕ ವಲಯದಲ್ಲೂ ಲೋಪವಾಗುತ್ತದೆ ಎಂದು ಹೇಳಿದರು.

ಅದಕ್ಕಾಗಿ ನಾನು ಖಾಸಗಿ ದೂರು ಸಲ್ಲಿಸುತ್ತಿದ್ದು, ಜನಾರ್ದನರೆಡ್ಡಿ ಅವರು ನ್ಯಾಯಾಲಯಕ್ಕೆ ಬಂದು ತಮ್ಮ ಹೇಳಿಕೆಗಳಿಗೆ ಸಾಕ್ಷ್ಯ ನೀಡಲಿ ಎಂದು ಆಗ್ರಹಿಸಿದರು.

ಇದನ್ನು ಓದಿ:ಮೈಸೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ಧರ್ಮಸ್ಥಳ ಚಲೋ

ಧರ್ಮಸ್ಥಳದ ವಿಚಾರದಲ್ಲಿ ವಿಚಾರಣೆಗೊಳಗಾಗುತ್ತಿರುವವರು ದೆಹಲಿಯಲ್ಲಿರುವ ಮನೆಯಲ್ಲಿ ತಮ್ಮನ್ನು ಭೇಟಿ ಮಾಡಿದ್ದರು, ತಲೆ ಬುರುಡೆಯನ್ನು ಸಶಿಕಾಂತ್ ಶೆಂಥಿಲ್ ಅವರೇ ತಂದುಕೊಟ್ಟರು ಎಂದೆಲ್ಲ ಆರೋಪಗಳು ಮಾಡಲಾಗಿದೆ. ಈಗಿನ ಕೇಂದ್ರ ಸರ್ಕಾರ ದೆಹಲಿಯಲ್ಲಿ ನನಗೆ ಈವರೆಗೂ ಒಂದು ಮನೆಯನ್ನು ಕೊಟ್ಟಿಲ್ಲ. ತಮಿಳುನಾಡು ಹೌಸ್‍ನಲ್ಲಿ ವಾಸವಿದ್ದೇನೆ. ತಲೆ ಬುರುಡೆ ಎಲ್ಲಿ ಸಿಗುತ್ತದೆ ಎಂದು ನನಗೆ ಗೊತ್ತಿಲ್ಲ. ಬಹುಶಃ ಜನಾರ್ದನರೆಡ್ಡಿಗೆ ಚೆನ್ನಾಗಿ ಗೊತ್ತಿರಬೇಕು ಎಂದು ತಿರುಗೇಟು ನೀಡಿದ್ದರು.

ಯಾವ ಆರೋಪಿಗಳೂ ನನ್ನ ಸಂಪರ್ಕದಲ್ಲಿ ಇಲ್ಲ. ಜನಾರ್ದನರೆಡ್ಡಿ ಹೇಳಿಕೆಯ ಬಳಿಕ ಮಾಧ್ಯಮಗಳು ನನಗೆ ಕರೆ ಮಾಡಿದಾಗಲಷ್ಟೇ ವಿಷಯ ತಿಳಿಯಿತು ಎಂದು ಸ್ಪಷ್ಟಪಡಿಸಿದರು.

ಇಡೀ ದೇಶದಲ್ಲಿ ಬಲಪಂಥೀಯ ರಾಜಕೀಯದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಐಎಎಸ್ ಹುದ್ದೆಗೆ ನೀಡಿದ ರಾಜಿನಾಮೆ ಪತ್ರದಲ್ಲೂ ಅದನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ. ಇದಕ್ಕಾಗಿ ನನ್ನ ವಿರುದ್ಧ ವ್ಯವಸ್ಥಿತವಾಗಿ ಸಂಬಂಧ ಪಡದೇ ಇರುವ ವಿಷಯಗಳಲ್ಲೂ ನನ್ನ ಹೆಸರನ್ನು ಸೇರಿಸಿ ಅಪಪ್ರಚಾರ ಮಾಡಲಾಗುತ್ತಿದೆ. ಬಲಪಂಥೀಯವಾದದ ವಿರುದ್ಧ ಹೋರಾಟ ಮಾಡುವವರ ವಿರುದ್ಧ ಈ ರೀತಿಯ ಆರೋಪಗಳು ಸಾಮಾನ್ಯವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

34 mins ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

45 mins ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

1 hour ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

1 hour ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

1 hour ago

ಮಡಿಕೇರಿ| ಕಾಡಾನೆ ದಾಳಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…

2 hours ago