ರಾಜ್ಯ

ಗಾಲಿ ಜನಾರ್ದನರೆಡ್ಡಿ ವಿರುದ್ಧ ದೂರು ದಾಖಲಿಸಿದ ಸಂಸದ ಶಶಿಕಾಂತ ಸೆಂಥಿಲ್‌

ಬೆಂಗಳೂರು : ಧರ್ಮಸ್ಥಳದ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿರುವ ಶಾಸಕ ಗಾಲಿ ಜನಾರ್ದನರೆಡ್ಡಿ ವಿರುದ್ಧ ತಮಿಳುನಾಡಿನ ತಿರುವಳ್ಳೂರ್ ಕ್ಷೇತ್ರದ ಸಂಸದ ಶಶಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಅವರು, ನ್ಯಾಯಾಲಯಕ್ಕೆ ಖಾಸಗಿ ದೂರಿನ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ ಸಾಕ್ಷ್ಯ ಒದಗಿಸುವಂತೆ ಜನಾರ್ದನ ರೆಡ್ಡಿಗೆ ಒತ್ತಾಯಿಸಿದ್ದಾರೆ.

ಇದನ್ನು ಓದಿ:ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಚಲೋ ಮಾಡ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾವತಿ ಶಾಸಕರಾಗಿರುವ ಗಾಲಿ ಜನಾರ್ದನರೆಡ್ಡಿ ತಮ್ಮ ವಿರುದ್ಧ ಮಾಡಿರುವ ಆರೋಪಗಳು ಬಾಲಿಶತನದಿಂದ ಕೂಡಿವೆ. ಅವುಗಳಿಗೆ ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಎಂದು ನಾನು ನಿರ್ಲಕ್ಷಿಸಿದ್ದೆ. ಜೊತೆಗೆ ಸಂಸದನಾದ ನನಗೆ ಇಂತಹ ವಿಚಾರಗಳಿಗಿಂತಲೂ ಬೇರೆ ಮಹತ್ವದ ವಿಷಯಗಳಿದ್ದವು ಎಂದಿದ್ದಾರೆ.

ಧರ್ಮಸ್ಥಳದ ವಿಚಾರವಾಗಿ ವಾಟ್ಸ್‌ಪ್ ನೋಡಿಕೊಂಡು ಜನಾರ್ದನರೆಡ್ಡಿ ಮಾತನಾಡಿದಂತಿದೆ. ನನ್ನನ್ನು ಮಾಸ್ಟರ್ ಮೈಂಡ್, ಸ್ಕ್ರಿಪ್ಟ್ ರೈಟರ್ ಎಂದೆಲ್ಲಾ ಬಿಂಬಿಸಿದ್ದಾರೆ. ಅವರ ಹೇಳಿಕೆಯ ಬಳಿಕ ದಿನಕ್ಕೊಂದು ವರದಿ ಬಿತ್ತರವಾಗುತ್ತಿದ್ದು, ನನ್ನ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನಗಳಾಗುತ್ತಿವೆ. ಈ ಹಂತದಲ್ಲಿ ಪ್ರತಿಕ್ರಿಯಿಸಲೇಬೇಕಾಗಿರುವುದು ಅನಿವಾರ್ಯವಾಗಲಿದೆ ಎಂದು ಹೇಳಿದರು.‌

ಕರ್ನಾಟಕ ನನಗೆ ಹೊಸದಲ್ಲ. ಐಎಎಸ್ ಅಧಿಕಾರಿಯಾಗಿ ಇಲ್ಲಿ 10 ವರ್ಷ ಕೆಲಸ ಮಾಡಿದ್ದೇನೆ. ನನ್ನ ಬಗ್ಗೆ ಎಲ್ಲರಿಗೂ ಅರಿವಿದೆ. ತಮ್ಮ ವಿರುದ್ಧ ಆರೋಪ ಮಾಡಿರುವ ಜನಾರ್ದನರೆಡ್ಡಿ ಎಂತಹ ವ್ಯಕ್ತಿ ಎಂದು ಎಲ್ಲರಿಗೂ ಗೊತ್ತಿದೆ. ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ ಆರೋಪಕ್ಕಾಗಿ 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕರ್ನಾಟಕದ ಹೆಸರನ್ನು ಇಡೀ ದೇಶದಲ್ಲಿ ಕೆಡಿಸಿದ್ದಾರೆ. ಇಂತಹ ವ್ಯಕ್ತಿಯ ಆರೋಪಗಳನ್ನು ಹರಡಲು ಬಿಟ್ಟರೆ ನನಗೂ ಸಮಸ್ಯೆಯಾಗಲಿದೆ, ಸಾರ್ವಜನಿಕ ವಲಯದಲ್ಲೂ ಲೋಪವಾಗುತ್ತದೆ ಎಂದು ಹೇಳಿದರು.

ಅದಕ್ಕಾಗಿ ನಾನು ಖಾಸಗಿ ದೂರು ಸಲ್ಲಿಸುತ್ತಿದ್ದು, ಜನಾರ್ದನರೆಡ್ಡಿ ಅವರು ನ್ಯಾಯಾಲಯಕ್ಕೆ ಬಂದು ತಮ್ಮ ಹೇಳಿಕೆಗಳಿಗೆ ಸಾಕ್ಷ್ಯ ನೀಡಲಿ ಎಂದು ಆಗ್ರಹಿಸಿದರು.

ಇದನ್ನು ಓದಿ:ಮೈಸೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ಧರ್ಮಸ್ಥಳ ಚಲೋ

ಧರ್ಮಸ್ಥಳದ ವಿಚಾರದಲ್ಲಿ ವಿಚಾರಣೆಗೊಳಗಾಗುತ್ತಿರುವವರು ದೆಹಲಿಯಲ್ಲಿರುವ ಮನೆಯಲ್ಲಿ ತಮ್ಮನ್ನು ಭೇಟಿ ಮಾಡಿದ್ದರು, ತಲೆ ಬುರುಡೆಯನ್ನು ಸಶಿಕಾಂತ್ ಶೆಂಥಿಲ್ ಅವರೇ ತಂದುಕೊಟ್ಟರು ಎಂದೆಲ್ಲ ಆರೋಪಗಳು ಮಾಡಲಾಗಿದೆ. ಈಗಿನ ಕೇಂದ್ರ ಸರ್ಕಾರ ದೆಹಲಿಯಲ್ಲಿ ನನಗೆ ಈವರೆಗೂ ಒಂದು ಮನೆಯನ್ನು ಕೊಟ್ಟಿಲ್ಲ. ತಮಿಳುನಾಡು ಹೌಸ್‍ನಲ್ಲಿ ವಾಸವಿದ್ದೇನೆ. ತಲೆ ಬುರುಡೆ ಎಲ್ಲಿ ಸಿಗುತ್ತದೆ ಎಂದು ನನಗೆ ಗೊತ್ತಿಲ್ಲ. ಬಹುಶಃ ಜನಾರ್ದನರೆಡ್ಡಿಗೆ ಚೆನ್ನಾಗಿ ಗೊತ್ತಿರಬೇಕು ಎಂದು ತಿರುಗೇಟು ನೀಡಿದ್ದರು.

ಯಾವ ಆರೋಪಿಗಳೂ ನನ್ನ ಸಂಪರ್ಕದಲ್ಲಿ ಇಲ್ಲ. ಜನಾರ್ದನರೆಡ್ಡಿ ಹೇಳಿಕೆಯ ಬಳಿಕ ಮಾಧ್ಯಮಗಳು ನನಗೆ ಕರೆ ಮಾಡಿದಾಗಲಷ್ಟೇ ವಿಷಯ ತಿಳಿಯಿತು ಎಂದು ಸ್ಪಷ್ಟಪಡಿಸಿದರು.

ಇಡೀ ದೇಶದಲ್ಲಿ ಬಲಪಂಥೀಯ ರಾಜಕೀಯದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಐಎಎಸ್ ಹುದ್ದೆಗೆ ನೀಡಿದ ರಾಜಿನಾಮೆ ಪತ್ರದಲ್ಲೂ ಅದನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ. ಇದಕ್ಕಾಗಿ ನನ್ನ ವಿರುದ್ಧ ವ್ಯವಸ್ಥಿತವಾಗಿ ಸಂಬಂಧ ಪಡದೇ ಇರುವ ವಿಷಯಗಳಲ್ಲೂ ನನ್ನ ಹೆಸರನ್ನು ಸೇರಿಸಿ ಅಪಪ್ರಚಾರ ಮಾಡಲಾಗುತ್ತಿದೆ. ಬಲಪಂಥೀಯವಾದದ ವಿರುದ್ಧ ಹೋರಾಟ ಮಾಡುವವರ ವಿರುದ್ಧ ಈ ರೀತಿಯ ಆರೋಪಗಳು ಸಾಮಾನ್ಯವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

23 mins ago

ಮಹದೇಶ್ವರ ಬೆಟ್ಟ | ಪಾದಾಯಾತ್ರೆಗೆ ತಾತ್ಕಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…

50 mins ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

1 hour ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

2 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago