ರಾಜ್ಯ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಅಳಿಯ ವೈದ್ಯ ವೃತ್ತಿಗೆ ರಾಜೀನಾಮೆ!

ಮೈಸೂರು: ೨೦೨೪ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವಾರು ಚಟುವಟಿಕೆಗಳು ಗರಿಗೆದರಿದ್ದು, ಚಾಮರಾಜನಗರ ಕ್ಷೇತ್ರದ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಅವರ ಅಳಿಯ ತಮ್ಮ ವೈದ್ಯ ವೃತ್ತಿಗೆ ರಾಜೀನಾಮೆ ಸಲ್ಲಿಸಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಬೆಂಗಳೂರಿನ ಸಂಜಯ್‌ ಗಾಂಧಿ ಆಸ್ಪತ್ರೆಯಲ್ಲಿ ಖ್ಯಾತ ಬೆನ್ನುಹುರಿ ತಜ್ಞ ಹಾಗೂ ಪ್ರಾಧ್ಯಾಪಕರಾಗಿದ್ದ ಕೆಲಸ ಮಾಡುತ್ತಿದ್ದ ಡಾ. ಎನ್‌.ಎಸ್‌ ಮೋಹನ್‌ ಅವರು ತಮ್ಮ ಲಕ್ಷಾಂತರ ರೂ. ವೇತನದ ಸರ್ಕಾರಿ ಹುದ್ದೆಯನ್ನು ತೊರೆದು, ಬಿಜೆಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಕಳೆದ ೧೫ ವರ್ಷಗಳಿಂದ ಸರ್ಕಾರಿ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಜಕೀಯದಲ್ಲಿ ಸಕ್ರಿಯರಾಗುವ ಉದ್ದೇಶದಿಂದ ಉನ್ನತ ಹುದ್ದೆಗೇರುವ ಅವಕಾಶವಿದ್ದರು ಕಳೆದುಕೊಂಡಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಮೋಹನ್‌ ಅವರು ಆರ್‌ಎಸ್‌ಎಸ್‌ ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಈ ಹಿನ್ನಲೆ ಬಿಜೆಪಿ ವರಿಷ್ಠರು ಟಿಕೆಟ್‌ ನೀಡುವ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರ ಅಳಿಯರಾಗಿರುವ ಮೋಹನ್‌ ಅವರು, ತಮ್ಮ ಮಾವನ ಮುಂದಿನ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿದೆ.

andolanait

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

19 mins ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

20 mins ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

24 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

27 mins ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

32 mins ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

44 mins ago