ಮೈಸೂರು: ೨೦೨೪ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವಾರು ಚಟುವಟಿಕೆಗಳು ಗರಿಗೆದರಿದ್ದು, ಚಾಮರಾಜನಗರ ಕ್ಷೇತ್ರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ತಮ್ಮ ವೈದ್ಯ ವೃತ್ತಿಗೆ ರಾಜೀನಾಮೆ ಸಲ್ಲಿಸಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಖ್ಯಾತ ಬೆನ್ನುಹುರಿ ತಜ್ಞ ಹಾಗೂ ಪ್ರಾಧ್ಯಾಪಕರಾಗಿದ್ದ ಕೆಲಸ ಮಾಡುತ್ತಿದ್ದ ಡಾ. ಎನ್.ಎಸ್ ಮೋಹನ್ ಅವರು ತಮ್ಮ ಲಕ್ಷಾಂತರ ರೂ. ವೇತನದ ಸರ್ಕಾರಿ ಹುದ್ದೆಯನ್ನು ತೊರೆದು, ಬಿಜೆಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಕಳೆದ ೧೫ ವರ್ಷಗಳಿಂದ ಸರ್ಕಾರಿ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಜಕೀಯದಲ್ಲಿ ಸಕ್ರಿಯರಾಗುವ ಉದ್ದೇಶದಿಂದ ಉನ್ನತ ಹುದ್ದೆಗೇರುವ ಅವಕಾಶವಿದ್ದರು ಕಳೆದುಕೊಂಡಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಮೋಹನ್ ಅವರು ಆರ್ಎಸ್ಎಸ್ ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಈ ಹಿನ್ನಲೆ ಬಿಜೆಪಿ ವರಿಷ್ಠರು ಟಿಕೆಟ್ ನೀಡುವ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಇನ್ನೂ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯರಾಗಿರುವ ಮೋಹನ್ ಅವರು, ತಮ್ಮ ಮಾವನ ಮುಂದಿನ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…