ರಾಜ್ಯ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌

ಮೈಸೂರು: ಮೈಸೂರು-ಕೊಡಗು ಅಭಿವೃದ್ಧಿ ಯೋಜನೆಗಳಿಗೆ ಸಹಕರಿಸಿ, ಅವುಗಳನ್ನು ಬೆಂಬಲಿಸಿ ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಧನ್ಯವಾದ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿˌ ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಸದರಿ ಯೋಜನೆಗಳ ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು ಎಂದಿದ್ದಾರೆ.

ನಮ್ಮ ಎಲ್ಲಾ ಬೇಡಿಕೆಗಳಿಗೆˌ ಮೈಸೂರಿನ ಅಭಿವೃದ್ದಿ ಯೋಜನೆಗಳಿಗೆ ಸಹಕರಿಸಿ, ಬೆಂಬಲಿಸಿ, ಅವುಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಸಚಿವರಿಗೆ ಈ ಮೂಲಕ ಮೈಸೂರು-ಕೊಡಗು ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

10 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

41 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

44 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

1 hour ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

2 hours ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

2 hours ago