ಮೈಸೂರು: ಮೈಸೂರು-ಕೊಡಗು ಅಭಿವೃದ್ಧಿ ಯೋಜನೆಗಳಿಗೆ ಸಹಕರಿಸಿ, ಅವುಗಳನ್ನು ಬೆಂಬಲಿಸಿ ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿˌ ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಸದರಿ ಯೋಜನೆಗಳ ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು ಎಂದಿದ್ದಾರೆ.
ನಮ್ಮ ಎಲ್ಲಾ ಬೇಡಿಕೆಗಳಿಗೆˌ ಮೈಸೂರಿನ ಅಭಿವೃದ್ದಿ ಯೋಜನೆಗಳಿಗೆ ಸಹಕರಿಸಿ, ಬೆಂಬಲಿಸಿ, ಅವುಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಸಚಿವರಿಗೆ ಈ ಮೂಲಕ ಮೈಸೂರು-ಕೊಡಗು ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ.…
ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…