ಮೈಸೂರು: ಮೈಸೂರು-ಕೊಡಗು ಅಭಿವೃದ್ಧಿ ಯೋಜನೆಗಳಿಗೆ ಸಹಕರಿಸಿ, ಅವುಗಳನ್ನು ಬೆಂಬಲಿಸಿ ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿˌ ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಸದರಿ ಯೋಜನೆಗಳ ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು ಎಂದಿದ್ದಾರೆ.
ನಮ್ಮ ಎಲ್ಲಾ ಬೇಡಿಕೆಗಳಿಗೆˌ ಮೈಸೂರಿನ ಅಭಿವೃದ್ದಿ ಯೋಜನೆಗಳಿಗೆ ಸಹಕರಿಸಿ, ಬೆಂಬಲಿಸಿ, ಅವುಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಸಚಿವರಿಗೆ ಈ ಮೂಲಕ ಮೈಸೂರು-ಕೊಡಗು ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…