ರಾಜ್ಯ

ಮುಡಾ ಪ್ರಕರಣ: ಸಚಿವ ಬೈರತಿ ಸುರೇಶ್‌ ಅವರೇ ನಿಜವಾದ ಕಳ್ಳ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್‌ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ.

ಸಚಿವ ಬೈರತಿ ಸುರೇಶ್‌ ಅವರು ನಿನ್ನೆ ಛಲವಾದಿ ನಾರಾಯಣಸ್ವಾಮಿ ಮುಡಾ ದಾಖಲೆಯನ್ನು ಕದ್ದಿರಬಹುದು ಎಂದು ಆರೋಪ ಮಾಡಿದ್ದರು. ಈ ಆರೋಪದ ಕುರಿತು ಛಲವಾದಿ ನಾರಾಯಣಸ್ವಾಮಿ ಇಂದು(ಅಕ್ಟೋಬರ್‌.19) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ಇ.ಡಿ. ತನಿಖಾ ತಂಡವು ನಿನ್ನೆ(ಶುಕ್ರವಾರ) ಮುಡಾ ಕಚೇರಿ ಮೇಲೆ ರೇಡ್‌ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೆ. ಬಳಿಕ ಸುರೇಶ್‌ ಅವರು ಹೆಲಿಕಾಫ್ಟರ್‌ನಲ್ಲಿ ಹೋಗಿ ದಾಖಲೆ ತೆಗೆದುಕೊಂಡು ಬಂದಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಚಿವ ಬೈರತಿ ಅವರನ್ನು ಸಹ ತನಿಖೆ ನಡೆಸಬೇಕು ಎಂದು ಹೇಳಿದ್ದೆ ಅಷ್ಟೇ. ಆದರೆ ಸುರೇಶ್‌ ಅವರು ನನ್ನನ್ನೇ ಕಳ್ಳ ಅಂದಿದ್ದು ನಿಜವಾದ ಕಳ್ಳ ಅವರೇ ಆಗಿದ್ದಾರೆ ಎಂದು ತಿರುಗೇಟು ನೀಡಿದರು.

ಸುರೇಶ್‌ ಅವರೇ ನೀವು ಮಂತ್ರಿ ಆಗೋಕೆ ಯೋಗ್ಯರಲ್ಲ. ನಾನು ಮುಡಾ ದಾಖಲೆಗಳನ್ನು ಕದ್ದಿದ್ದರೆ ನೀವು ಸಚಿವರಾಗಿ ಏನು ಕಡ್ಲೆಪುರಿ ಅಥವಾ ಚುರುಮುರಿ ತಿನ್ನುತ್ತಿದ್ದರೇ? ತಾವು ಮುಡಾ ಸಚಿವರಾಗಿ ನನ್ನ ಮೇಲೆ ದೂರು ದಾಖಲಿಸಬಹುದಿತ್ತು ಅಲ್ಲವೇ? ಎಂದು ವಾಗ್ದಾಳಿ ಮಾಡಿದ್ದಾರೆ.

ಮುಡಾ ಪ್ರಕರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾದ ಕೂಡಲೇ ಹೆಲಿಕಾಫ್ಟರ್‌ನಲ್ಲಿ ಮುಡಾ ಕಚೇರಿಗೆ ಹೋಗಿ ದಾಖಲೆಗಳನ್ನು ತಂದಿದ್ದು ಸುರೇಶ್‌. ಆ ದಿನ ಅಲ್ಲಿಂದ ಮುಡಾ ದಾಖಲೆಗಳನ್ನು ತರದೇ ಹೋಗಿದ್ದರೆ, ಇವತ್ತಿನ ದಿನ ಈ ಕೇಸ್‌ ಇಷ್ಟೊಂದು ಹೈಪ್‌ ಆಗುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿಸಿದ್ದೇ ಸುರೇಶ್ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

11 seconds ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

26 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

1 hour ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

1 hour ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

1 hour ago

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

1 hour ago