ರಾಜ್ಯ

ಮುಡಾ ಪ್ರಕರಣ: ಸಚಿವ ಬೈರತಿ ಸುರೇಶ್‌ ಅವರೇ ನಿಜವಾದ ಕಳ್ಳ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್‌ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ.

ಸಚಿವ ಬೈರತಿ ಸುರೇಶ್‌ ಅವರು ನಿನ್ನೆ ಛಲವಾದಿ ನಾರಾಯಣಸ್ವಾಮಿ ಮುಡಾ ದಾಖಲೆಯನ್ನು ಕದ್ದಿರಬಹುದು ಎಂದು ಆರೋಪ ಮಾಡಿದ್ದರು. ಈ ಆರೋಪದ ಕುರಿತು ಛಲವಾದಿ ನಾರಾಯಣಸ್ವಾಮಿ ಇಂದು(ಅಕ್ಟೋಬರ್‌.19) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ಇ.ಡಿ. ತನಿಖಾ ತಂಡವು ನಿನ್ನೆ(ಶುಕ್ರವಾರ) ಮುಡಾ ಕಚೇರಿ ಮೇಲೆ ರೇಡ್‌ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೆ. ಬಳಿಕ ಸುರೇಶ್‌ ಅವರು ಹೆಲಿಕಾಫ್ಟರ್‌ನಲ್ಲಿ ಹೋಗಿ ದಾಖಲೆ ತೆಗೆದುಕೊಂಡು ಬಂದಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಚಿವ ಬೈರತಿ ಅವರನ್ನು ಸಹ ತನಿಖೆ ನಡೆಸಬೇಕು ಎಂದು ಹೇಳಿದ್ದೆ ಅಷ್ಟೇ. ಆದರೆ ಸುರೇಶ್‌ ಅವರು ನನ್ನನ್ನೇ ಕಳ್ಳ ಅಂದಿದ್ದು ನಿಜವಾದ ಕಳ್ಳ ಅವರೇ ಆಗಿದ್ದಾರೆ ಎಂದು ತಿರುಗೇಟು ನೀಡಿದರು.

ಸುರೇಶ್‌ ಅವರೇ ನೀವು ಮಂತ್ರಿ ಆಗೋಕೆ ಯೋಗ್ಯರಲ್ಲ. ನಾನು ಮುಡಾ ದಾಖಲೆಗಳನ್ನು ಕದ್ದಿದ್ದರೆ ನೀವು ಸಚಿವರಾಗಿ ಏನು ಕಡ್ಲೆಪುರಿ ಅಥವಾ ಚುರುಮುರಿ ತಿನ್ನುತ್ತಿದ್ದರೇ? ತಾವು ಮುಡಾ ಸಚಿವರಾಗಿ ನನ್ನ ಮೇಲೆ ದೂರು ದಾಖಲಿಸಬಹುದಿತ್ತು ಅಲ್ಲವೇ? ಎಂದು ವಾಗ್ದಾಳಿ ಮಾಡಿದ್ದಾರೆ.

ಮುಡಾ ಪ್ರಕರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾದ ಕೂಡಲೇ ಹೆಲಿಕಾಫ್ಟರ್‌ನಲ್ಲಿ ಮುಡಾ ಕಚೇರಿಗೆ ಹೋಗಿ ದಾಖಲೆಗಳನ್ನು ತಂದಿದ್ದು ಸುರೇಶ್‌. ಆ ದಿನ ಅಲ್ಲಿಂದ ಮುಡಾ ದಾಖಲೆಗಳನ್ನು ತರದೇ ಹೋಗಿದ್ದರೆ, ಇವತ್ತಿನ ದಿನ ಈ ಕೇಸ್‌ ಇಷ್ಟೊಂದು ಹೈಪ್‌ ಆಗುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿಸಿದ್ದೇ ಸುರೇಶ್ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

10 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

11 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

11 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

12 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

12 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

12 hours ago