ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ.
ಸಚಿವ ಬೈರತಿ ಸುರೇಶ್ ಅವರು ನಿನ್ನೆ ಛಲವಾದಿ ನಾರಾಯಣಸ್ವಾಮಿ ಮುಡಾ ದಾಖಲೆಯನ್ನು ಕದ್ದಿರಬಹುದು ಎಂದು ಆರೋಪ ಮಾಡಿದ್ದರು. ಈ ಆರೋಪದ ಕುರಿತು ಛಲವಾದಿ ನಾರಾಯಣಸ್ವಾಮಿ ಇಂದು(ಅಕ್ಟೋಬರ್.19) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ಇ.ಡಿ. ತನಿಖಾ ತಂಡವು ನಿನ್ನೆ(ಶುಕ್ರವಾರ) ಮುಡಾ ಕಚೇರಿ ಮೇಲೆ ರೇಡ್ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೆ. ಬಳಿಕ ಸುರೇಶ್ ಅವರು ಹೆಲಿಕಾಫ್ಟರ್ನಲ್ಲಿ ಹೋಗಿ ದಾಖಲೆ ತೆಗೆದುಕೊಂಡು ಬಂದಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಚಿವ ಬೈರತಿ ಅವರನ್ನು ಸಹ ತನಿಖೆ ನಡೆಸಬೇಕು ಎಂದು ಹೇಳಿದ್ದೆ ಅಷ್ಟೇ. ಆದರೆ ಸುರೇಶ್ ಅವರು ನನ್ನನ್ನೇ ಕಳ್ಳ ಅಂದಿದ್ದು ನಿಜವಾದ ಕಳ್ಳ ಅವರೇ ಆಗಿದ್ದಾರೆ ಎಂದು ತಿರುಗೇಟು ನೀಡಿದರು.
ಸುರೇಶ್ ಅವರೇ ನೀವು ಮಂತ್ರಿ ಆಗೋಕೆ ಯೋಗ್ಯರಲ್ಲ. ನಾನು ಮುಡಾ ದಾಖಲೆಗಳನ್ನು ಕದ್ದಿದ್ದರೆ ನೀವು ಸಚಿವರಾಗಿ ಏನು ಕಡ್ಲೆಪುರಿ ಅಥವಾ ಚುರುಮುರಿ ತಿನ್ನುತ್ತಿದ್ದರೇ? ತಾವು ಮುಡಾ ಸಚಿವರಾಗಿ ನನ್ನ ಮೇಲೆ ದೂರು ದಾಖಲಿಸಬಹುದಿತ್ತು ಅಲ್ಲವೇ? ಎಂದು ವಾಗ್ದಾಳಿ ಮಾಡಿದ್ದಾರೆ.
ಮುಡಾ ಪ್ರಕರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾದ ಕೂಡಲೇ ಹೆಲಿಕಾಫ್ಟರ್ನಲ್ಲಿ ಮುಡಾ ಕಚೇರಿಗೆ ಹೋಗಿ ದಾಖಲೆಗಳನ್ನು ತಂದಿದ್ದು ಸುರೇಶ್. ಆ ದಿನ ಅಲ್ಲಿಂದ ಮುಡಾ ದಾಖಲೆಗಳನ್ನು ತರದೇ ಹೋಗಿದ್ದರೆ, ಇವತ್ತಿನ ದಿನ ಈ ಕೇಸ್ ಇಷ್ಟೊಂದು ಹೈಪ್ ಆಗುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿಸಿದ್ದೇ ಸುರೇಶ್ ಎಂದು ಆರೋಪಿಸಿದ್ದಾರೆ.
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…