ರಾಜ್ಯ

ಮುಡಾ ಪ್ರಕರಣ : ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್

ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ನಾವು ದೇಸಾಯಿ ಆಯೋಗ ರಚಿಸಿದ್ದೆವು. ವರದಿಯಲ್ಲಿ ಮುಖ್ಯಮಂತ್ರಿಗಳು ಹಾಗೂ ಕುಟುಂಬದ ಮೇಲೆ ಯಾವುದೇ ಆರೋಪವಿಲ್ಲ. ಅದನ್ನು ವರದಿಯಲ್ಲಿ ಅವರು ಉಲ್ಲೇಖಿಸಿದ್ದಾರೆ. ಅಧಿಕಾರಿಗಳ ಮೇಲೆ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಇದರ ಬಗ್ಗೆ ಸಂಪುಟ ಸಭೆ ಒಪ್ಪಿಕೊಂಡಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ಹೇಳಿದರು.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಅವರು, ಈ ಮಾಹಿತಿ ನೀಡಿದರು.

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 60 ಕ್ರಿಮಿನಲ್ ಮೊಕದ್ದಮೆಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾಮಗಾರಿಗಳ ಅವ್ಯವಹಾರ/ಭ್ರಷ್ಟಾಚಾರದ ಆರೋಪಗಳ ಕುರಿತು ‘ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್, ಆಯೋಗದ ವಿಚಾರಣಾ ವರದಿಯನ್ನು ಸ್ವೀಕಾರ ಮಾಡಿದ್ದೇವೆ. ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ವರ್ಷಾಂತ್ಯಕ್ಕೆ ಜಿಪಂ, ತಾಪಂ ಚುನಾವಣೆ!
ಇನ್ನು, ರಾಜ್ಯದ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಶೀಘ್ರದಲ್ಲಿ ನಡೆಯಲಿದೆ. ಈಗಾಗಲೇ ಚುನಾವಣೆಗೆ ನಾಲ್ಕು ವರ್ಷ ತಡವಾಗಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪ್ರಕ್ರಿಯೆ ನಡೆಯುತ್ತಿದೆ. ಕೆಲ ದಿನಗಳ ಹಿಂದೆ ಮಾತನಾಡಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ, ಚುನಾವಣೆಗೆ ಎರಡು – ಮೂರು ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದಿದ್ದರು. 2025ರ ವರ್ಷಾಂತ್ಯದೊಳಗೆ ಚುನಾವಣೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನವೆಂಬರ್‌ ವೇಳೆಗೆ ಚುನಾವಣೆಯ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದ್ದು, ಡಿಸೆಂಬರ್‌ನಲ್ಲಿ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ. ಈಗಾಗಲೇ ಚುನಾವಣಾ ಆಯೋಗ ಕೂಡ ಅಗತ್ಯ ಸಿದ್ಧತೆ ನಡೆಸಿದ್ದು, ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಇತ್ತೀಚೆಗೆ ಮಾಹಿತಿ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

1 hour ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

3 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

4 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

7 hours ago