ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ(ಸೆ.9) ಮತ್ತೆ ಮುಂದೂಡಿದೆ.
ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 12ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಾಧೀಶ ಎಂ.ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಧೀರ್ಘ ವಿಚಾರಣೆ ನಡೆಯಿತು.
ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ, ಪ್ರಾಸಿಕ್ಯೂಷನ್ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಹೇಳಿ ಲಲಿತಾ ಕುಮಾರಿ ಪ್ರಕರಣವನ್ನು ಉಲ್ಲೇಖಿಸಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ತಾವು ಸೆಪ್ಟಂಬರ್ 12ರಂದು ವಾದಿಸುವುದಾಗಿ ಕೋರ್ಟ್ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್, ಏನೇ ಇದ್ದರೂ ಅಂದೇ ವಾದ ಮಂಡಿಸಿ ಕೊನೆಗೊಳಿಸಬೇಕು ಎಂದು ವಿಚಾರಣೆಯನ್ನು ಸೆಪ್ಟಂಬರ್ 12ಕ್ಕೆ ಮುಂದೂಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…