ಮಂಗಳೂರು: ಇಲ್ಲಿನ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು, ಅದರ ರಕ್ತವನ್ನು ಮುಡಾ ಕೇಸ್ನ ದೂರುದಾರರದ ಸ್ನೇಹಮಯಿ ಕೃಷ್ಣ ಹಾಗೂ ಆರ್ಟಿಐ ಕಾರ್ಯಕರ್ತ ಗಂಗರಾಜು ಅವರ ಫೋಟೋಗಳಿಗೆ ಅರ್ಪಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ಪ್ರಕರಣ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಫೋನ್ನಲ್ಲಿ ವೀಡಿಯೋ ಚಿತ್ರೀಕರಣವಾಗಿದೆ ಎಂದು ತಿಳಿದು ಬಂದಿದೆ.
ಕಳೆದ ದಿನಗಳ ಹಿಂದೆಷ್ಟೆ ಮಸಾಜ್ ಪಾರ್ಲರ್ ಒಂದಕ್ಕೆ ಅಕ್ರಮವಾಗಿ ನುಗಿ ಗಲಾಟೆ ನಡೆಸಿದ್ದ ಆರೋಪದ ಮೇಲೆ ಪ್ರಸಾದ್ ಅತ್ತಾವರ್ ಬಂಧನವಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರು ಬಂಧಿತ ಆರೋಪಿಯ ಮೊಬೈಲ್ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆದಿದ್ದಾರೆ. ಆ ವೇಳೆ ಶಕ್ತಿ ದೇವತೆಗೆ ಪ್ರಾಣಿ ಬಲಿ ನೀಡಿ, ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಅವರ ಫೋಟೋಗಳನ್ನಿಟ್ಟು ರಕ್ತಾಭಿಷೇಕ ಮಾಡಿರುವ ಸ್ಫೋಟಕ ಅಂಸ ಬೆಳಕಿಗೆ ಬಂದಿದೆ.
ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಇಬ್ಬರ ಫೋಟೋಗಳಿಗೆ ರಕ್ತಾಭಿಷೇಕ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಮಡದಿಗೆ ಮಂಜೂರಾಗಿರುವ ಮುಡಾ ನಿವೇಶನಗಳ ವಿರುದ್ಧದ ಹೋರಾಟದಲ್ಲಿ ಈ ಇಬ್ಬರಿಗೂ ಬಲ ತುಂಬುವ ಉದ್ದೇಶ ಹೊಂದಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…