ರಾಜ್ಯ

ಶಕ್ತಿ ದೇವತೆಗೆ ರಕ್ತಾಭಿಷೇಕ: ಮುಡಾ ಕೇಸ್‌ನ ದೂರುದಾರರಾದ ಸ್ನೇಹಮಯಿ ಕೃಷ್ಣ, ಗಂಗರಾಜು ಅವರ ಫೋಟೋಗಳಿಗೆ ಅರ್ಪಣೆ

ಮಂಗಳೂರು: ಇಲ್ಲಿನ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು, ಅದರ ರಕ್ತವನ್ನು ಮುಡಾ ಕೇಸ್‌ನ ದೂರುದಾರರದ ಸ್ನೇಹಮಯಿ ಕೃಷ್ಣ ಹಾಗೂ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರ ಫೋಟೋಗಳಿಗೆ ಅರ್ಪಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಪ್ರಕರಣ ಶ್ರೀರಾಮ ಸೇನೆ ಮುಖಂಡ ಪ್ರಸಾದ್‌ ಅತ್ತಾವರ ಮೊಬೈಲ್‌ ಫೋನ್‌ನಲ್ಲಿ ವೀಡಿಯೋ ಚಿತ್ರೀಕರಣವಾಗಿದೆ ಎಂದು ತಿಳಿದು ಬಂದಿದೆ.

ಕಳೆದ ದಿನಗಳ ಹಿಂದೆಷ್ಟೆ ಮಸಾಜ್‌ ಪಾರ್ಲರ್‌ ಒಂದಕ್ಕೆ ಅಕ್ರಮವಾಗಿ ನುಗಿ ಗಲಾಟೆ ನಡೆಸಿದ್ದ ಆರೋಪದ ಮೇಲೆ ಪ್ರಸಾದ್‌ ಅತ್ತಾವರ್‌ ಬಂಧನವಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರು ಬಂಧಿತ ಆರೋಪಿಯ ಮೊಬೈಲ್‌ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆದಿದ್ದಾರೆ. ಆ ವೇಳೆ ಶಕ್ತಿ ದೇವತೆಗೆ ಪ್ರಾಣಿ ಬಲಿ ನೀಡಿ, ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಅವರ ಫೋಟೋಗಳನ್ನಿಟ್ಟು ರಕ್ತಾಭಿಷೇಕ ಮಾಡಿರುವ ಸ್ಫೋಟಕ ಅಂಸ ಬೆಳಕಿಗೆ ಬಂದಿದೆ.

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಈ ಇಬ್ಬರ ಫೋಟೋಗಳಿಗೆ ರಕ್ತಾಭಿಷೇಕ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಮಡದಿಗೆ ಮಂಜೂರಾಗಿರುವ ಮುಡಾ ನಿವೇಶನಗಳ ವಿರುದ್ಧದ ಹೋರಾಟದಲ್ಲಿ ಈ ಇಬ್ಬರಿಗೂ ಬಲ ತುಂಬುವ ಉದ್ದೇಶ ಹೊಂದಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅರ್ಚನ ಎಸ್‌ ಎಸ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

10 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

10 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

11 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

14 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

16 hours ago