ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ಆದರೆ, ಒಂದು ವರ್ಷದ ನಂತರ ವರದಿಯನ್ನು ಹಸ್ತಾಂತರ ಮಾಡಿತು.
ಗುರುವಾರ ವಿಧಾನಸೌಧದ ಮುಖ್ಯಕಾರ್ಯದರ್ಶಿಗಳ ಕೊಠಡಿಯಲ್ಲಿ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು. ನ್ಯಾ.ಪಿ.ಎನ್.ದೇಸಾಯಿ ಏಕಸದಸ್ಯ ಆಯೋಗ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ವರದಿ ಮಂಡಿಸುವ ಸಾಧ್ಯತೆ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿತ್ತು.
ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸುವಂತೆ ಸೂಚನೆ ನೀಡಲಾಗಿತ್ತು.
ಕೆಲ ರಾಜಕಾರಣಿಗಳು, ಅಧಿಕಾರಿಗಳು, ಬಿಲ್ಡರ್ ಗಳಿಗೆ ಸಂಕಷ್ಟವೋ? ರಿಲೀಫ್ ಸಿಗುತ್ತೋ ಎಂಬ ಕುತೂಹಲವಿದೆ. ಅಂದಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದ ಕಾರಣದಿಂದ ವಿಚಾರಣಾ ಆಯೋಗ ರಚಿಸಲಾಗಿತ್ತು.
2024 ಜುಲೈನಲ್ಲಿ ನ್ಯಾ.ಪಿ.ಎನ್.ದೇಸಾಯಿ ಏಕಸದಸ್ಯ ಆಯೋಗ ರಚಿಸಿದ್ದ ಸರ್ಕಾರ, 2006ರಿಂದ 2024ರ ಜುಲೈ 15ರವರೆಗೂ ನಡೆದಿರುವ ಭೂಸ್ವಾಧೀನ, ಬಡಾವಣೆಗಳ ನಿರ್ಮಾಣ, ನಿವೇಶನ ಹಂಚಿಕೆ, ಪರಿಹಾರ ವಿತರಣೆ ಮತ್ತು ಬದಲಿ ನಿವೇಶನಗಳ ಹಂಚಿಕೆ ಕುರಿತ ಆರೋಪಗಳ ಕುರಿತು ವಿಚಾರಣೆಗೆ ಸೂಚಿಸಿತ್ತು.
ಹೆಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ (ಎರಡು ಅವಧಿ), ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್, ಸಿದ್ದರಾಮಯ್ಯ (ಎರಡು ಅವಧಿ) ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪ್ರಾಧಿಕಾರದಲ್ಲಿ ನಡೆದಿರಬಹುದಾದ ಅವ್ಯವಹಾರಗಳ ಕುರಿತು ವಿಚಾರಣೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ವರ್ಷದ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಿರುವ ನ್ಯಾ.ದೇಸಾಯಿ ನೇತೃತ್ವದ ಆಯೋಗ ಹಲವು ಶಿಫಾರಸ್ಸುಗಳ ಮಾಡಿದೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…