ರಾಜ್ಯ

ಮುಡಾ ಪ್ರಕರಣ : 6 ಸಂಪುಟಗಳ ದೇಸಾಯಿ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ‌ಆದರೆ, ಒಂದು ವರ್ಷದ ನಂತರ ವರದಿಯನ್ನು ಹಸ್ತಾಂತರ ಮಾಡಿತು.

ಗುರುವಾರ ವಿಧಾನಸೌಧದ‌ ಮುಖ್ಯಕಾರ್ಯದರ್ಶಿಗಳ ಕೊಠಡಿಯಲ್ಲಿ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು. ನ್ಯಾ.ಪಿ.ಎನ್.ದೇಸಾಯಿ‌ ಏಕಸದಸ್ಯ ಆಯೋಗ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ವರದಿ ಮಂಡಿಸುವ ಸಾಧ್ಯತೆ ಇದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿತ್ತು.

ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸುವಂತೆ ಸೂಚನೆ ನೀಡಲಾಗಿತ್ತು.

ಕೆಲ ರಾಜಕಾರಣಿಗಳು, ಅಧಿಕಾರಿಗಳು, ಬಿಲ್ಡರ್ ಗಳಿಗೆ ಸಂಕಷ್ಟವೋ? ರಿಲೀಫ್ ಸಿಗುತ್ತೋ ಎಂಬ ಕುತೂಹಲವಿದೆ. ಅಂದಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದ ಕಾರಣದಿಂದ ವಿಚಾರಣಾ ಆಯೋಗ ರಚಿಸಲಾಗಿತ್ತು.

2024 ಜುಲೈನಲ್ಲಿ ನ್ಯಾ.ಪಿ.ಎನ್.ದೇಸಾಯಿ ಏಕಸದಸ್ಯ ಆಯೋಗ ರಚಿಸಿದ್ದ ಸರ್ಕಾರ, 2006ರಿಂದ 2024ರ ಜುಲೈ 15ರವರೆಗೂ ನಡೆದಿರುವ ಭೂಸ್ವಾಧೀನ, ಬಡಾವಣೆಗಳ ನಿರ್ಮಾಣ, ನಿವೇಶನ ಹಂಚಿಕೆ, ಪರಿಹಾರ ವಿತರಣೆ ಮತ್ತು ಬದಲಿ ನಿವೇಶನಗಳ ಹಂಚಿಕೆ ಕುರಿತ ಆರೋಪಗಳ ಕುರಿತು ವಿಚಾರಣೆಗೆ ಸೂಚಿಸಿತ್ತು.

ಹೆಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ (ಎರಡು ಅವಧಿ), ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್‌, ಸಿದ್ದರಾಮಯ್ಯ (ಎರಡು ಅವಧಿ) ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪ್ರಾಧಿಕಾರದಲ್ಲಿ ನಡೆದಿರಬಹುದಾದ ಅವ್ಯವಹಾರಗಳ ಕುರಿತು ವಿಚಾರಣೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ವರ್ಷದ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಿರುವ ನ್ಯಾ.ದೇಸಾಯಿ ನೇತೃತ್ವದ ಆಯೋಗ ಹಲವು ಶಿಫಾರಸ್ಸುಗಳ ಮಾಡಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

40 mins ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

4 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

5 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

5 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

5 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

5 hours ago