ರಾಜ್ಯ

ಮುಡಾ ಪ್ರಕರಣ : 6 ಸಂಪುಟಗಳ ದೇಸಾಯಿ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ‌ಆದರೆ, ಒಂದು ವರ್ಷದ ನಂತರ ವರದಿಯನ್ನು ಹಸ್ತಾಂತರ ಮಾಡಿತು.

ಗುರುವಾರ ವಿಧಾನಸೌಧದ‌ ಮುಖ್ಯಕಾರ್ಯದರ್ಶಿಗಳ ಕೊಠಡಿಯಲ್ಲಿ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು. ನ್ಯಾ.ಪಿ.ಎನ್.ದೇಸಾಯಿ‌ ಏಕಸದಸ್ಯ ಆಯೋಗ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ವರದಿ ಮಂಡಿಸುವ ಸಾಧ್ಯತೆ ಇದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿತ್ತು.

ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸುವಂತೆ ಸೂಚನೆ ನೀಡಲಾಗಿತ್ತು.

ಕೆಲ ರಾಜಕಾರಣಿಗಳು, ಅಧಿಕಾರಿಗಳು, ಬಿಲ್ಡರ್ ಗಳಿಗೆ ಸಂಕಷ್ಟವೋ? ರಿಲೀಫ್ ಸಿಗುತ್ತೋ ಎಂಬ ಕುತೂಹಲವಿದೆ. ಅಂದಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದ ಕಾರಣದಿಂದ ವಿಚಾರಣಾ ಆಯೋಗ ರಚಿಸಲಾಗಿತ್ತು.

2024 ಜುಲೈನಲ್ಲಿ ನ್ಯಾ.ಪಿ.ಎನ್.ದೇಸಾಯಿ ಏಕಸದಸ್ಯ ಆಯೋಗ ರಚಿಸಿದ್ದ ಸರ್ಕಾರ, 2006ರಿಂದ 2024ರ ಜುಲೈ 15ರವರೆಗೂ ನಡೆದಿರುವ ಭೂಸ್ವಾಧೀನ, ಬಡಾವಣೆಗಳ ನಿರ್ಮಾಣ, ನಿವೇಶನ ಹಂಚಿಕೆ, ಪರಿಹಾರ ವಿತರಣೆ ಮತ್ತು ಬದಲಿ ನಿವೇಶನಗಳ ಹಂಚಿಕೆ ಕುರಿತ ಆರೋಪಗಳ ಕುರಿತು ವಿಚಾರಣೆಗೆ ಸೂಚಿಸಿತ್ತು.

ಹೆಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ (ಎರಡು ಅವಧಿ), ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್‌, ಸಿದ್ದರಾಮಯ್ಯ (ಎರಡು ಅವಧಿ) ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪ್ರಾಧಿಕಾರದಲ್ಲಿ ನಡೆದಿರಬಹುದಾದ ಅವ್ಯವಹಾರಗಳ ಕುರಿತು ವಿಚಾರಣೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ವರ್ಷದ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಿರುವ ನ್ಯಾ.ದೇಸಾಯಿ ನೇತೃತ್ವದ ಆಯೋಗ ಹಲವು ಶಿಫಾರಸ್ಸುಗಳ ಮಾಡಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಯುದ್ಧ ಅಂತ್ಯಗೊಂಡಿಲ್ಲ: ಕದನ ವಿರಾಮವಷ್ಟೇ ಎಂದ ಮೊಜ್ತಬಾ ಖಮೇನಿ

ಟೆಹರಾನ್:‌ ಇರಾನ್‌ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಕದನ…

43 mins ago

ಹಲಗೂರು: ಬೆಂಕಿಗೆ ಆಹುತಿಯಾದ ತೆಂಗಿನ ತೋಟ

ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ…

1 hour ago

ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…

2 hours ago

ತಂಬಾಕು ಬೆಳೆಗಾರರ ಸಮಸ್ಯೆ: ಜಿಎಸ್‌ಟಿ ಮೂಲಕ ತೆರಿಗೆ ಹಾಕುವ ಕೇಂದ್ರವು ಪರಿಹಾರ ನೀಡಲಿ ಎಂದ ಎಂ.ಲಕ್ಷ್ಮಣ್

ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…

2 hours ago

RSS ವಿಷ ಸರ್ಪ ಎಂಬ ಖರ್ಗೆ ಹೇಳಿಕೆ ವಿಚಾರ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ…

3 hours ago

ಗ್ಯಾಸ್ ಸಿಲಿಂಡರ್‌ ಅಭಾವ: ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಎಂ ಲಕ್ಷ್ಮಣ್ ಕಿಡಿ

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…

3 hours ago