Mysore
15
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಮುಡಾ ಪ್ರಕರಣ: ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಇಡಿ ಅರ್ಜಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ 14 ಸೈಟ್‌ಗಳನ್ನು ನೀಡಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ವರದಿಯನ್ನು ತಿರಸ್ಕರಿಸಬೇಕೆಂದು ಜಾರಿ ನಿರ್ದೇಶನಾಲಯವು (ಇ.ಡಿ) ತಕರಾರು ಅರ್ಜಿ ಸಲ್ಲಿಸಿದೆ.

ಮುಡಾ ಪ್ರಕರಣದ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ಎಂಟು ಪುಟಗಳ ತಕರಾರು ಅರ್ಜಿ ಸಲ್ಲಿಸಿದೆ.

ಪಾರ್ವತಿ ಅವರಿಗೆ ನೀಡಿರುವ ನಿವೇಶನಗಳ ವಿಷಯದಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳ ನಮಗೆ ಲಭ್ಯವಿದೆ. ಈ ಪ್ರಕರಣದ ವಿಸ್ತೃತ ತನಿಖೆ ಆಗಬೇಕು. ಹೀಗಾಗಿ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಬೇಕು ಎಂದು ಜಾರಿ ನಿರ್ದೇಶನಾಲಯವು ಕೋರಿದೆ.

Tags:
error: Content is protected !!