Mysore
28
overcast clouds

Social Media

ಗುರುವಾರ, 30 ಜುಲೈ 2026
Light
Dark

ಮುಡಾ ಪ್ರಕರಣ: ಬೈರತಿ ಸುರೇಶ್‌ ಕಚೇರಿ ಸಿಬ್ಬಂದಿಗೆ ನೋಟಿಸ್‌ ನೀಡಿದ ಇಡಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಚಿವ ಬೈರತಿ ಸುರೇಶ್‌ ಅವರ ಕಚೇರಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಇಡಿ ತನಿಖೆ ಚುರುಕಾಗುತ್ತಿದ್ದು, ವಿಧಾನಸೌಧದ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಸಚಿವ ಬೈರತಿ ಸುರೇಶ್‌ ಅವರ ಕಚೇರಿಯ ಸಿಬ್ಬಂದಿ ಮಂಗಳವಾರ ಬೆಳಿಗ್ಗೆ(ಡಿ.3) ಸುಮಾರು 11 ಗಂಟೆಯ ವೇಳೆಗೆ ಇಡಿ ಕಚೇರಿಗೆ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಮುಡಾ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ನೋಟಿಸ್‌ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

 

Tags:
error: Content is protected !!