ರಾಜ್ಯ

ಮುಡಾ ಪ್ರಕರಣ: ಸಿಎಂ ಪರ ನಿಂತ ಜಿಟಿ ದೇವೆಗೌಡ; ರಾಜ್ಯ ನಾಯಕರ ಪ್ರತಿಕ್ರಿಯೆ ಹೀಗಿದೆ….

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಪಟ್ಟು ಹಿಡಿದಿವೆ. ಈ ನಡುವೆ, ಇತ್ತ ಜೆಡಿಎಸ್‌ ಶಾಸಕ ಜಿಟಿ ದೇವೆಗೌಡ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆಯೇ ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದು, ʼಸಿಎಂ ರಾಜೀನಾಮೆʼ ಕೊಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸದ್ಯ, ಈ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇನ್ನೂ ಈ ಬಗ್ಗೆ ರಾಜ್ಯ ರಾಜಕೀಯ ನಾಯಕರು ಪ್ರತಿಕ್ರಿಯಿಸಿದ್ದು, ಹಲವರ ಪ್ರತಿಕ್ರಿಯೆ ಇಲ್ಲಿದೆ…

ಸಿದ್ದು ಪರ ಜಿಟಿಡಿ: ಕಾರಣ ಬಿಚ್ಚಿಟ್ಟ ಎಚ್‌ಡಿಕೆ
ಜೆಡಿಎಸ್‌ ನಾಯಕ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಜಿ.ಡಿ.ದೇವೇಗೌಡ ಅವರು ಮೈಸೂರಿನ ಶಾಸಕರಾಗಿದ್ದಾರೆ. ತಾನು ತೊಂದರೆಗೆ ಸಿಲುಕಿಕೊಳ್ಳಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿರಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ಜಿಟಿಡಿ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ
ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ದಸರಾ ಉದ್ಘಾಟನಾ ವೇದಿಕೆಯೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯಾಗಬೇಕೆ ಹೊರತು, ರಾಜಕೀಯ ವಿಚಾರಗಳ ಪ್ರಸ್ತಾಪ ಆಗಬಾರದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ತಪ್ಪು ಮಾಡಿಲ್ಲ ಎಂದು ಹೇಳುತ್ತಾರೆ. ಏನು ತಪ್ಪು ಮಾಡಿಲ್ಲ ಎನ್ನುವುದೇ ಆದರೆ ದಸರಾ ವೇದಿಕೆಯಲ್ಲಿ ರಾಜಕೀಯ ಯಾಕೆ ಮಾತನಾಡಬೇಕು. ಅದೇನು ರಾಜಕೀಯ ವೇದಿಕೆನಾ ಎಂದು ಪ್ರಶ್ನಿಸಿದ್ದಾರೆ. ಸಾಂಸ್ಕೃತಿಕ ವೇದಿಕೆಯೂ ರಾಜಕಾರಿಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು. ಆದರೆ ರಾಜಕೀಯ ಬಳಕೆ ಆಗಿರೋದು ತಪ್ಪು. ಅದು ಶಾಸಕ ಜಿ.ಟಿ.ದೇವೇಗೌಡ ಆಗಿರಬಹುದು ಅಥವಾ ಇನ್ನೊಬ್ಬರ ಆಗಿರಲಿ. ಇದು ನಾಚಿಕೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

ಜಿಟಿಡಿಗೆ ಧನ್ಯವಾದ ಹೇಳಿದ ಜಮೀರ್…
ಸಚಿವ ಜಮ್ಮೀರ್‌ ಅಹ್ಮದ್‌ ಮಾತನಾಡಿ, ಜಿ.ಡಿ.ದೇವೇಗೌಡ ಅವರಿಗೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ತಪ್ಪೇನಿಲ್ಲ ಎಂಬುದು ಅವರಿಗೆ ಗೊತ್ತಿದೆ. ಹೀಗಾಗಿ ಜಿಟಿಡಿ ಸತ್ಯ ಹೇಳಿದ್ದಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

ಜಿಟಿಡಿ ಹೇಳಿರುವುದು ಸರಿಯಿದೆ; ಸಚಿವ ದಿನೇಶ್ ಗುಂಡೂರಾವ್
ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ನೈತಿಕತೆಯಾಗಲೀ, ಸೈದ್ಧಾಂತಿಕ ನಿಲುವುಗಳಾಗಲೀ ಇಲ್ಲ. ಕೇವಲ ಅಧಿಕಾರವಷ್ಟೇ ಬೇಕು. ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಧಕ್ಕೆ ತರುವುದು ಕುಮಾರಸ್ವಾಮಿಯವರ ಮೂಲ ಉದ್ದೇಶ. ಎಫ್‍ಐಆರ್ ಆದ ತಕ್ಷಣ ರಾಜೀನಾಮೆ ನೀಡಬೇಕೇ? ಎಂದು ಜಿ.ಟಿ.ದೇವೇಗೌಡ ಹೇಳಿರುವುದು ಸರಿಯಿದೆ ಎಂದು ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡರು.

ಹಾಸನದಲ್ಲಿ ಜೆಡಿಎಸ್‌ ಶಾಸಕ ಎ.ಮಂಜು ಮಾತನಾಡಿ, ಜಿ.ಡಿ.ದೇವೇಗೌಡ ಅವರು ಏನು ಮಾತಾಡಿದ್ದಾರೆ, ಉದ್ದೇಶ ಏನು ನಮಗೆ ಗೊತ್ತಿಲ್ಲ. ಮಾಧ್ಯಮ ಸುದ್ದಿ ನೋಡಿದಾಗಲೇ ವಿಚಾರ ತಿಳಿದಿದ್ದು ಎಂದಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

1 hour ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

2 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

2 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

2 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

5 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

5 hours ago