ರಾಜ್ಯ

ಮುಡಾ ಪ್ರಕರಣ: ಸಿಎಂ ಪರ ನಿಂತ ಜಿಟಿ ದೇವೆಗೌಡ; ರಾಜ್ಯ ನಾಯಕರ ಪ್ರತಿಕ್ರಿಯೆ ಹೀಗಿದೆ….

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಪಟ್ಟು ಹಿಡಿದಿವೆ. ಈ ನಡುವೆ, ಇತ್ತ ಜೆಡಿಎಸ್‌ ಶಾಸಕ ಜಿಟಿ ದೇವೆಗೌಡ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆಯೇ ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದು, ʼಸಿಎಂ ರಾಜೀನಾಮೆʼ ಕೊಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸದ್ಯ, ಈ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇನ್ನೂ ಈ ಬಗ್ಗೆ ರಾಜ್ಯ ರಾಜಕೀಯ ನಾಯಕರು ಪ್ರತಿಕ್ರಿಯಿಸಿದ್ದು, ಹಲವರ ಪ್ರತಿಕ್ರಿಯೆ ಇಲ್ಲಿದೆ…

ಸಿದ್ದು ಪರ ಜಿಟಿಡಿ: ಕಾರಣ ಬಿಚ್ಚಿಟ್ಟ ಎಚ್‌ಡಿಕೆ
ಜೆಡಿಎಸ್‌ ನಾಯಕ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಜಿ.ಡಿ.ದೇವೇಗೌಡ ಅವರು ಮೈಸೂರಿನ ಶಾಸಕರಾಗಿದ್ದಾರೆ. ತಾನು ತೊಂದರೆಗೆ ಸಿಲುಕಿಕೊಳ್ಳಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿರಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ಜಿಟಿಡಿ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ
ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ದಸರಾ ಉದ್ಘಾಟನಾ ವೇದಿಕೆಯೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯಾಗಬೇಕೆ ಹೊರತು, ರಾಜಕೀಯ ವಿಚಾರಗಳ ಪ್ರಸ್ತಾಪ ಆಗಬಾರದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ತಪ್ಪು ಮಾಡಿಲ್ಲ ಎಂದು ಹೇಳುತ್ತಾರೆ. ಏನು ತಪ್ಪು ಮಾಡಿಲ್ಲ ಎನ್ನುವುದೇ ಆದರೆ ದಸರಾ ವೇದಿಕೆಯಲ್ಲಿ ರಾಜಕೀಯ ಯಾಕೆ ಮಾತನಾಡಬೇಕು. ಅದೇನು ರಾಜಕೀಯ ವೇದಿಕೆನಾ ಎಂದು ಪ್ರಶ್ನಿಸಿದ್ದಾರೆ. ಸಾಂಸ್ಕೃತಿಕ ವೇದಿಕೆಯೂ ರಾಜಕಾರಿಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು. ಆದರೆ ರಾಜಕೀಯ ಬಳಕೆ ಆಗಿರೋದು ತಪ್ಪು. ಅದು ಶಾಸಕ ಜಿ.ಟಿ.ದೇವೇಗೌಡ ಆಗಿರಬಹುದು ಅಥವಾ ಇನ್ನೊಬ್ಬರ ಆಗಿರಲಿ. ಇದು ನಾಚಿಕೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

ಜಿಟಿಡಿಗೆ ಧನ್ಯವಾದ ಹೇಳಿದ ಜಮೀರ್…
ಸಚಿವ ಜಮ್ಮೀರ್‌ ಅಹ್ಮದ್‌ ಮಾತನಾಡಿ, ಜಿ.ಡಿ.ದೇವೇಗೌಡ ಅವರಿಗೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ತಪ್ಪೇನಿಲ್ಲ ಎಂಬುದು ಅವರಿಗೆ ಗೊತ್ತಿದೆ. ಹೀಗಾಗಿ ಜಿಟಿಡಿ ಸತ್ಯ ಹೇಳಿದ್ದಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

ಜಿಟಿಡಿ ಹೇಳಿರುವುದು ಸರಿಯಿದೆ; ಸಚಿವ ದಿನೇಶ್ ಗುಂಡೂರಾವ್
ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ನೈತಿಕತೆಯಾಗಲೀ, ಸೈದ್ಧಾಂತಿಕ ನಿಲುವುಗಳಾಗಲೀ ಇಲ್ಲ. ಕೇವಲ ಅಧಿಕಾರವಷ್ಟೇ ಬೇಕು. ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಧಕ್ಕೆ ತರುವುದು ಕುಮಾರಸ್ವಾಮಿಯವರ ಮೂಲ ಉದ್ದೇಶ. ಎಫ್‍ಐಆರ್ ಆದ ತಕ್ಷಣ ರಾಜೀನಾಮೆ ನೀಡಬೇಕೇ? ಎಂದು ಜಿ.ಟಿ.ದೇವೇಗೌಡ ಹೇಳಿರುವುದು ಸರಿಯಿದೆ ಎಂದು ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡರು.

ಹಾಸನದಲ್ಲಿ ಜೆಡಿಎಸ್‌ ಶಾಸಕ ಎ.ಮಂಜು ಮಾತನಾಡಿ, ಜಿ.ಡಿ.ದೇವೇಗೌಡ ಅವರು ಏನು ಮಾತಾಡಿದ್ದಾರೆ, ಉದ್ದೇಶ ಏನು ನಮಗೆ ಗೊತ್ತಿಲ್ಲ. ಮಾಧ್ಯಮ ಸುದ್ದಿ ನೋಡಿದಾಗಲೇ ವಿಚಾರ ತಿಳಿದಿದ್ದು ಎಂದಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

3 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

7 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

7 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

8 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

9 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

10 hours ago