ರಾಜ್ಯ

ಮುಡಾ ಪ್ರಕರಣ: ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್‌ಗೆ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ ಅನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತು ಇಂದು(ಮಾರ್ಚ್.‌7) ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಕಾಯ್ದಿರಿಸಿದ ಆದೇಶವನ್ನು ಅಂತಿಮಗೊಳಿಸಿ ಇಡಿ ತನಿಖೆಯನ್ನೇ ರದ್ದುಗೊಳಿಸುವಂತೆ ಹೇಳಿದೆ. ಇಡಿ ದಾಖಲಿಸಿದ ಇಸಿಐಆರ್‌ ಅನ್ನು ರದ್ದುಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೆ ನೀಡಿದ್ದ ಸಮನ್ಸ್‌ ಅನ್ನು ಹೈಕೋರ್ಟ್‌ ವಜಾಗೊಳಿಸಿದೆ ಎಂದು ತೀರ್ಪು ಪ್ರಕಟಿಸಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ಬಿಗ್‌ ರಿಲೀಫ್‌ ನೀಡಿದೆ.

ಏನಿದು ಪ್ರಕರಣ?

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಮುಡಾದಿಂದ ದಾಖಲೆ ಕಡತಗಳನ್ನು ತೆಗೆದುಕೊಂಡು ಹೋಗಿರುವ ಹಿನ್ನೆಲೆಯಲ್ಲಿ ಸಚಿವ ಬೈರತಿ ಸುರೇಶ್‌ ಅವರಿಗೆ ಇ.ಡಿ. ತನಿಖಾ ಸಂಸ್ಥೆಯೂ ವಿಚಾರಣೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿತ್ತು.

ಈ ಸಮನ್ಸ್‌ ಅನ್ನು ಪ್ರಶ್ನಿಸಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವೂ ತೀರ್ಪಿನ ಆದೇಶವನ್ನು ಕಾಯ್ದಿರಿಸಿತ್ತು. ಆದರೆ ಇಂದು ಆ ಆದೇಶವನ್ನು ಪ್ರಕಟಿಸಿದ್ದು, ಇ.ಡಿ. ತನಿಖೆ ಸಂಸ್ಥೆ ನೀಡಿರುವ ಸಮನ್ಸ್‌ ಅನ್ನು ರದ್ದುಗೊಳಿಸಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಇನ್ನು ಮುಡಾ ಪ್ರಕರಣದಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರ ಪರ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರೆ, ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

3 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

4 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

5 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

5 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

6 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

7 hours ago