ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಈ ಕುರಿತು ಇಂದು(ಮಾರ್ಚ್.7) ಹೈಕೋರ್ಟ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಕಾಯ್ದಿರಿಸಿದ ಆದೇಶವನ್ನು ಅಂತಿಮಗೊಳಿಸಿ ಇಡಿ ತನಿಖೆಯನ್ನೇ ರದ್ದುಗೊಳಿಸುವಂತೆ ಹೇಳಿದೆ. ಇಡಿ ದಾಖಲಿಸಿದ ಇಸಿಐಆರ್ ಅನ್ನು ರದ್ದುಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೆ ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ತೀರ್ಪು ಪ್ರಕಟಿಸಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಬಿಗ್ ರಿಲೀಫ್ ನೀಡಿದೆ.
ಏನಿದು ಪ್ರಕರಣ?
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಮುಡಾದಿಂದ ದಾಖಲೆ ಕಡತಗಳನ್ನು ತೆಗೆದುಕೊಂಡು ಹೋಗಿರುವ ಹಿನ್ನೆಲೆಯಲ್ಲಿ ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ. ತನಿಖಾ ಸಂಸ್ಥೆಯೂ ವಿಚಾರಣೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಈ ಸಮನ್ಸ್ ಅನ್ನು ಪ್ರಶ್ನಿಸಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವೂ ತೀರ್ಪಿನ ಆದೇಶವನ್ನು ಕಾಯ್ದಿರಿಸಿತ್ತು. ಆದರೆ ಇಂದು ಆ ಆದೇಶವನ್ನು ಪ್ರಕಟಿಸಿದ್ದು, ಇ.ಡಿ. ತನಿಖೆ ಸಂಸ್ಥೆ ನೀಡಿರುವ ಸಮನ್ಸ್ ಅನ್ನು ರದ್ದುಗೊಳಿಸಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.
ಇನ್ನು ಮುಡಾ ಪ್ರಕರಣದಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರ ಪರ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರೆ, ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…